ಆ್ಯಪ್ನಗರ

ಭತ್ತದ ಬೆಳೆ ಹಾನಿ :ಶಾಸಕರ ಸಮೀಕ್ಷೆ

ಸಿದ್ದಾಪುರ :ತಾಲೂಕಿನ ಕವಂಚೂರು ಗ್ರಾಪಂ ವ್ಯಾಪ್ತಿಯ ಅರೆಂದೂರು,ಕಲ್ಯಾಣಪುರ,ಕವಂಚೂರು ಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿದ ಭಾರಿ ಮಳೆಗೆ ಸುಮಾರು 120 ಹೆಕ್ಟೇರ್‌ ನಾಟಿ ಮಾಡಿರುವ ಭತ್ತದ ಸಸಿಗಳು,ಬಿತ್ತನೆ ಮಾಡಿದ ಬೀಜಗಳು ಕೊಳೆತು ಹೋಗಿದ್ದು ಬುಧವಾರ ಶಾಸಕ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭೇಟಿ ನೀಡಿ ಪರಿಶೀಲಿಸಿದರು.

Vijaya Karnataka 26 Jul 2018, 5:00 am
ಸಿದ್ದಾಪುರ :ತಾಲೂಕಿನ ಕವಂಚೂರು ಗ್ರಾಪಂ ವ್ಯಾಪ್ತಿಯ ಅರೆಂದೂರು,ಕಲ್ಯಾಣಪುರ,ಕವಂಚೂರು ಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿದ ಭಾರಿ ಮಳೆಗೆ ಸುಮಾರು 120 ಹೆಕ್ಟೇರ್‌ ನಾಟಿ ಮಾಡಿರುವ ಭತ್ತದ ಸಸಿಗಳು,ಬಿತ್ತನೆ ಮಾಡಿದ ಬೀಜಗಳು ಕೊಳೆತು ಹೋಗಿದ್ದು ಬುಧವಾರ ಶಾಸಕ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web paddy crop damage survey of mlas
ಭತ್ತದ ಬೆಳೆ ಹಾನಿ :ಶಾಸಕರ ಸಮೀಕ್ಷೆ


ಹಾನಿಗೊಳಗಾದ ಪ್ರದೇಶದ ಸಮೀಕ್ಷೆ ನಡೆಸಿ ಕಂದಾಯ ಮತ್ತು ಕೃಷಿಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ನೀಡಬೇಕು. ಹಾನಿಗೊಳಗಾದ ರೈತರಿಗೆ ಸರಕಾರದಿಂದ ಪರಿಹಾರ ನೀಡುವುದರ ಜತೆಗೆ ವಿಮಾಪರಿಹಾರವೂ ದೊರಕುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸದಸ್ಯ ನಾಗರಾಜ ನಾಯ್ಕ ಬೇಡ್ಕಣಿ.ಪಪಂ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್‌,ಗ್ರಾಪಂ ಸದಸ್ಯ ರಾಜು ಕಟ್ಟೆಮನೆ,ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಶಾಂತ,ಕವಂಚೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುಬ್ರಹ್ಮಣ್ಯ, ಕಂದಾಯ ನಿರೀಕ್ಷ ಕ ಡಿ.ಎಂ.ನಾಯ್ಕ. ಮುಂತಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ