ಆ್ಯಪ್ನಗರ

ಕ್ರೀಡೆಗಳಲ್ಲಿಹೆಚ್ಚು ಹೆಚ್ಚು ಪಾಲ್ಗೊಳ್ಳಿ

ಮುಂಡಗೋಡ : ಪಾಠದ ಜತೆಗೆ ಆಟಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ದಿವಾಕರ ಶೆಟ್ಟಿ ಹೇಳಿದರು.

Vijaya Karnataka 26 Sep 2019, 5:00 am
ಮುಂಡಗೋಡ : ಪಾಠದ ಜತೆಗೆ ಆಟಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ದಿವಾಕರ ಶೆಟ್ಟಿ ಹೇಳಿದರು.
Vijaya Karnataka Web participate more in sports
ಕ್ರೀಡೆಗಳಲ್ಲಿಹೆಚ್ಚು ಹೆಚ್ಚು ಪಾಲ್ಗೊಳ್ಳಿ


ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿಮಂಗಳವಾರ ಹಮ್ಮಿಕೊಂಡಿದ್ದ ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿಭಾಗವಹಿಸುವ ವಿದ್ಯಾರ್ಥಿಗಳು ಉತ್ತಮವಾಗಿ ಆಟಗಳನ್ನು ಆಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲು ಶ್ರಮಿಸಬೇಕು ಹಾಗೂ ನಿರ್ಣಯಕರು ಸಮರ್ಪಕ ನಿರ್ಣಯವನ್ನು ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧಿಕಾರಿ ಪ್ರವೀಣ ಕಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿಭಾಗವಹಿಸಬೇಕು ಹಾಗೂ ಕ್ರೀಡೆಗಳಲ್ಲಿಜಯಗಳಿಸುವ ಮೂಲಕ ತಮ್ಮ ಶಾಲೆಗಳ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು.

ತಾಲೂಕಿನ ಚಿಗಳ್ಳಿ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಪರಿಸರ ಜಾಗೃತಿ ಜಾಥಾ ಕುರಿತು ನೃತ್ಯ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಂ.ಬಸವರಾಜಪ್ಪ, ಎಂ.ಎಸ್‌.ಹೆಗಡೆ ಹಾಗೂ ಶಿಕ್ಷಣ ಇಲಾಖೆ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ