ಆ್ಯಪ್ನಗರ

ಪಕ್ಷ ನಿಷ್ಠೆ ನಮ್ಮ ಹೊಣೆ

ಭಟ್ಕಳ: ಅಧಿಕಾರ ಯಾರಿಗೂ ಶಾಶ್ವತವಲ್ಲ. ಅಧಿಕಾರದ ಏರಿಳಿತಗಳು ಸ್ವಾಭಾವಿಕವಾಗಿವೆ. ಆದರೆ ಪಕ್ಷ ನಿಷ್ಠೆ ಮತ್ತು ಸಂಘಟನೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

Vijaya Karnataka 16 Nov 2019, 5:00 am
ಭಟ್ಕಳ: ಅಧಿಕಾರ ಯಾರಿಗೂ ಶಾಶ್ವತವಲ್ಲ. ಅಧಿಕಾರದ ಏರಿಳಿತಗಳು ಸ್ವಾಭಾವಿಕವಾಗಿವೆ. ಆದರೆ ಪಕ್ಷ ನಿಷ್ಠೆ ಮತ್ತು ಸಂಘಟನೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.
Vijaya Karnataka Web party loyalty is our responsibility
ಪಕ್ಷ ನಿಷ್ಠೆ ನಮ್ಮ ಹೊಣೆ


ಅವರು ತಾಲೂಕಿನ ರಾಯಲ್‌ ಓಕ್‌ ಸಭಾಭವನದಲ್ಲಿಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಸಮಾಲೋಚನಾ ಸಭೆಯಲ್ಲಿಮಾತನಾಡಿದರು.

ಕೇವಲ ಪಕ್ಷದ ಬೂತ್‌ ಸಮಿತಿ ರಚನೆಯಿಂದ ಪಕ್ಷ ಗಟ್ಟಿಯಾಗುವುದಿಲ್ಲ. ಮಾಜಿ ಶಾಸಕರು, ಬ್ಲಾಕ್‌ ಪದಾಧಿಕಾರಿಗಳು, ಸದಸ್ಯರು ಕ್ರಿಯಾಶೀಲತೆಯನ್ನು ಮೈಗೂಡಿಸಿಕೊಂಡು ಜನರನ್ನು ತಲುಪುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು. ಜನರು ಅಭಿವೃದ್ಧಿಯ ಕಡೆ ಗಮನ ಹರಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕೇ ವಿನಃ ಇಲ್ಲಸಲ್ಲದ ವಿಷಯಗಳ ಬಗ್ಗೆ ಮರುಳಾಗಬಾರದು ಎಂದರು.

ಸುಪ್ರೀಂ ಕೋರ್ಟ್‌ ಆಮಿಷಕ್ಕೊಳಗಾಗಿ ಪಕ್ಷಾಂತರ ಮಾಡಿದ ಶಾಸಕರನ್ನು ಅಮಾನತುಗೊಳಿಸಿರುವ ಅಂದಿನ ವಿಧಾನಸಭಾ ಅಧ್ಯಕ್ಷರ ತೀರ್ಪನ್ನು ಎತ್ತಿ ಹಿಡಿದಿದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿಶಾಸಕರು ಅನರ್ಹರಾಗಿರುವುದು ಇದೇ ಮೊದಲ ಬಾರಿಯಾಗಿದೆ ಎಂದರು.

ಅಕಾಲಿಕ ಮಳೆಯಿಂದ ರಾಜ್ಯ ತತ್ತರಿಸಿ ಹೋಗಿದ್ದು, ಸಂತ್ರಸ್ಥರಿಗೆ ನೆರವಿಗೆ ಸರಕಾರ ಹೊರಡಿಸುತ್ತಿರುವ ಆಜ್ಞೆಗಳು ಅನುಷ್ಠಾನಕ್ಕೆ ಬರುತ್ತಿಲ್ಲ. ಪರಿಣಾಮವಾಗಿ ರೈತರು, ಕಾರ್ಮಿಕರು, ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ ಎಂದು ವಿವರಿಸಿದರು.

ಜಿ.ಪಂ. ಅಧ್ಯಕ್ಷೆ ಜಯಶ್ರೀ ಮೊಗೇರ, ಮಾಜಿ ಶಾಸಕ ಮಂಕಾಳು ವೈದ್ಯ, ಮಾಜಿ ಶಾಸಕ ಜೆ.ಡಿ.ನಾಯ್ಕ, ಮಜ್ಲಿಸೇ ಇಸ್ಲಾವ ತಂಜೀಮ್‌ ಸಂಸ್ಥೆಯ ಅಧ್ಯಕ್ಷ ಎಸ್‌.ಎಂ.ಫರ್ವೇಜ್‌, ಜಿಲ್ಲಾಕಾಂಗ್ರೆಸ್‌ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್‌ ಮಜೀದ್‌, ಭಟ್ಕಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ