ಆ್ಯಪ್ನಗರ

ಗ್ರಾಪಂ ಚುನಾವಣೆಗೆ ಸಿದ್ಧತೆ ನಡೆಸಿ

ಭಟ್ಕಳ : ಈಗ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಮಂಜೂರಾದ ಕೆಲಸಗಳ ಗುದ್ದಲಿ ಪೂಜೆ ನಡೆಯುತ್ತಿದ್ದು, ಜನರಿಗೆ ಈ ವಿಷಯ ತಿಳಿದಿದೆ ಎಂದು ಮಾಜಿ ಶಾಸಕ ಮಂಕಾಳು ವೈದ್ಯ ಹೇಳಿದರು.

Vijaya Karnataka 12 Aug 2019, 5:00 am
ಭಟ್ಕಳ : ಈಗ ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಅವಧಿಯಲ್ಲಿ ಮಂಜೂರಾದ ಕೆಲಸಗಳ ಗುದ್ದಲಿ ಪೂಜೆ ನಡೆಯುತ್ತಿದ್ದು, ಜನರಿಗೆ ಈ ವಿಷಯ ತಿಳಿದಿದೆ ಎಂದು ಮಾಜಿ ಶಾಸಕ ಮಂಕಾಳು ವೈದ್ಯ ಹೇಳಿದರು.
Vijaya Karnataka Web prepare for the grapham election
ಗ್ರಾಪಂ ಚುನಾವಣೆಗೆ ಸಿದ್ಧತೆ ನಡೆಸಿ


ಅವರು ಮುರುಡೇಶ್ವರದಲ್ಲಿ ನಡೆದ ಭಟ್ಕಳ ಬ್ಲಾಕ್‌ ಕಾಂಗ್ರೆಸ್‌ ಸಭೆಯಲ್ಲಿ ಮಾತನಾಡಿದರು.

ನನ್ನ ಅವಧಿಯಲ್ಲಿ ಮಂಜೂರಾದ ಅನುದಾನದ ಬಗ್ಗೆ ಕೆಲವರು ಮನಸ್ಸಿಗೆ ಬಂದಂತೆ ಟೀಕಿಸುತ್ತಿದ್ದರು. ಆಗ ಕಾಮಗಾರಿ ಕಳಪೆ ಎನ್ನುತ್ತಿದ್ದವರು ಈಗ ಏನು ಹೇಳುತ್ತಾರೆ, ಯಾವುದೇ ಅಧಿಕಾರಿ ಇನ್ನೂ ಅಮಾನತಾಗಿಲ್ಲ. ನನ್ನ ಅವಧಿಯಲ್ಲಿ ನಾನು ಪಕ್ಷಾತೀತವಾಗಿ ಕೆಲಸ ಮಾಡಿದ್ದೇನೆ. ಆದರೆ ಈಗ ಕಾಂಗ್ರೆಸ್‌ ಕಾರ್ಯಕರ್ತರಿಗೆ ತೊಂದರೆ ನೀಡಲಾಗುತ್ತಿದೆ. ನಾನು ಪಕ್ಷ ದ ಕಾರ್ಯಕರ್ತರೊಂದಿಗೆ ಇದ್ದು, ಯಾರೂ ಹೆದರುವ ಅಗತ್ಯ ಇಲ್ಲ. ಇನ್ನು 6-7 ತಿಂಗಳುಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಾಗುತ್ತಿದ್ದು, ಕಾರ್ಯಕರ್ತರು ಸಿದ್ಧತೆ ನಡೆಸಬೇಕು ಎಂದರು.

ಭಟ್ಕಳ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸಂತೋಷ ನಾಯ್ಕ ಮಾತನಾಡಿ, ಕಾಂಗ್ರೆಸ್‌ ಸದಸ್ಯರು ಕಷ್ಟದ ಪರಿಸ್ಥಿತಿಯಲ್ಲಿ ಇದೆ. ಕಾಂಗ್ರೆಸ್‌ ಇಂತಹ ಹಲವಾರು ಸವಾಲುಗಳನ್ನು ಎದುರಿಸಿ ಯಶಸ್ಸು ಕಂಡಿದೆ ಎಂದರು.

ಸಭೆಯಲ್ಲಿ ಕಾಂಗ್ರೆಸ್‌ ಜನಪ್ರತಿನಿಧಿಗಳು ಬಿಜೆಪಿ ಪ್ರಚಾರಕ್ಕೆ ಪ್ರತಿಯಾಗಿ ಯಾವುದೇ ಕಾರ್ಯಕ್ರಮ ಸಂಘಟಿಸುತ್ತಿಲ್ಲ ಎಂದು ಕೆಲವು ಮುಖಂಡರು, ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ನಾರಾಯಣ ನಾಯ್ಕ, ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್‌ ಮಜೀದ್‌, ಜಿ.ಪಂ. ಅಧ್ಯಕ್ಷೆ ಜಯಶ್ರೀ ಮೊಗೇರ, ತಾ.ಪಂ. ಅಧ್ಯಕ್ಷ ಈಶ್ವರ ನಾಯ್ಕ, ಜಿ.ಪಂ. ಸದಸ್ಯೆ ಸಿಂಧೂ ಭಾಸ್ಕರ ನಾಯ್ಕ, ತಾಪಂ ಉಪಾಧ್ಯಕ್ಷೆ ರಾಧಾ ಅಶೋಕ ವೈದ್ಯ, ಸದಸ್ಯರಾದ ಮೀನಾಕ್ಷಿ ಜಟ್ಟಪ್ಪ ನಾಯ್ಕ, ವಿಷ್ಣು ದೇವಡಿಗ, ಭಟ್ಕಳ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ವಿಠ್ಠಲ್‌ ನಾಯ್ಕ, ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುನೀರ್‌, ನೀಲಕಂಠ ಹೆಬ್ಬಾರ, ಫರ್ಜಾರ್‌ ಮೊದಲಾದವರು ಉಪಸ್ಥಿತರಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ