ಆ್ಯಪ್ನಗರ

ಸಿಜಿಕೆ ರಂಗ ಪುರಸ್ಕಾರ ಪ್ರದಾನ ಇಂದು

ಭಟ್ಕಳ : ಸಿಜಿಕೆ ರಂಗ ಪುರಸ್ಕಾರ ಕಾರ್ಯಕ್ರಮವು ಭಟ್ಕಳದ ದಿ ನ್ಯೂ ಇಂಗ್ಲೀಷ್‌ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ಜೂ.27ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕ ಹಾಗೂ ಅಂಕೋಲಾದ ಸಂಗಾತಿ ರಂಗಭೂಮಿಯ ಕಾರ್ಯಾಧ್ಯಕ್ಷ ಕೆ.ರಮೇಶ್‌ ತಿಳಿಸಿದ್ದಾರೆ.

Vijaya Karnataka 27 Jun 2019, 5:00 am
ಭಟ್ಕಳ : ಸಿಜಿಕೆ ರಂಗ ಪುರಸ್ಕಾರ ಕಾರ್ಯಕ್ರಮವು ಭಟ್ಕಳದ ದಿ ನ್ಯೂ ಇಂಗ್ಲೀಷ್‌ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ಜೂ.27ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ ಎಂದು ಕಾರ್ಯಕ್ರಮದ ಸಂಘಟಕ ಹಾಗೂ ಅಂಕೋಲಾದ ಸಂಗಾತಿ ರಂಗಭೂಮಿಯ ಕಾರ್ಯಾಧ್ಯಕ್ಷ ಕೆ.ರಮೇಶ್‌ ತಿಳಿಸಿದ್ದಾರೆ.
Vijaya Karnataka Web presenting the cjk theater award today
ಸಿಜಿಕೆ ರಂಗ ಪುರಸ್ಕಾರ ಪ್ರದಾನ ಇಂದು


ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಬೀದಿನಾಟಕ ಅಕಾಡೆಮಿ, ಸಂಗಾತಿ ರಂಗಭೂಮಿ ಅಂಕೋಲಾ, ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪತ್ರಕರ್ತರ ಸಂಘ ಭಟ್ಕಳ, ದಿ ನ್ಯೂ ಇಂಗ್ಲೀಷ್‌ ಪದವಿ ಪೂರ್ವ ಕಾಲೇಜು ಮತ್ತು ಪ್ರಾರ್ಥನಾ ಪ್ರತಿಷ್ಠಾನ ಭಟ್ಕಳ ಇವರ ಸಹಯೋಗದಲ್ಲಿ ಸಿಜಿಕೆ ಬೀದಿ ರಂಗದಿನದ ಪ್ರಯುಕ್ತ ಸಿಜಿಕೆ ರಂಗ ಪುರಸ್ಕಾರ ಪ್ರದಾನ ನಡೆಯಲಿದೆ. ಈ ಪುರಸ್ಕಾರಕ್ಕೆ ಭಟ್ಕಳದ ಹಿರಿಯ ರಂಗಕರ್ಮಿ ಅಶೋಕ ಮಹಾಲೆ ಆಯ್ಕೆಯಾಗಿದ್ದಾರೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್‌ ಭಟ್ಕಳ ತಾಲೂಕಿನಲ್ಲಿ ನಾಟಕ ರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕೆ.ಆರ್‌.ನಾಯ್ಕ, ಎಸ್‌.ಎನ್‌.ದೇವಡಿಗ, ರಾಮನಾಥ್‌ ಮಹಾಲೆ, ಗೋವಿಂದ ದೇವಡಿಗ, ನಜೀರ್‌ ಸಾಬ್‌ ಈ ಐವರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮವು ಜೂ.27ರಂದು ಭಟ್ಕಳದ ದಿ ನ್ಯೂ ಇಂಗ್ಲೀಷ್‌ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 10ಕ್ಕೆ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಸುನೀಲ್‌ ನಾಯ್ಕ ಉದ್ಘಾಟಿಸುವರು. ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಧ್ಯಕ್ಷ ತೆ ವಹಿಸುವರು. ಅತಿಥಿಗಳಾಗಿ ದಿ ನ್ಯೂ ಇಂಗ್ಲೀಷ್‌ ಪ.ಪೂ.ಕಾಲೇಜಿನ ಪ್ರಾಚಾರ್ಯ ವೀರೇಂದ್ರ ಶಾನಭಾಗ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್‌, ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಮಚಂದ್ರ ಕಿಣಿ ಹಾಗೂ ಉದ್ಯಮಿ ರಾಘವೇಂದ್ರ ಎಮ್‌.ನಾಯ್ಕ ಉಪಸ್ಥಿತರಿರುವರು ಎಂದು ಅವರು ವಿವರಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಪತ್ರಕರ್ತ ಸಂಘದ ಅಧ್ಯಕ್ಷ ರಾಮಚಂದ್ರ ಕಿಣಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ