ಆ್ಯಪ್ನಗರ

ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಬೆಲೆ ನೀಡಿ: ದಿನಕರ ಶೆಟ್ಟಿ

ಕುಮಟಾ : ದೇಶದ ಜನತೆಗೆ ನೆಮ್ಮದಿಯ ಬದುಕು ನೀಡುವವರು ರೈತರು ಮತ್ತು ದೇಶವನ್ನು ರಕ್ಷಿಸುವವರು ಸೈನಿಕರು ಇಬ್ಬರ ಸೇವೆಯೂ ಶ್ಲಾಘನೀಯ ಎಂದು ಬೈಲಹೊಂಗಲ ಮೂರೂ ಸಾವಿರ ಮಠದ ಶ್ರೀ ಪ್ರಭು ನೀಲಕಂಠ ಸ್ವಾಮಿಗಳು ಹೇಳಿದರು.

Vijaya Karnataka 24 Dec 2018, 5:00 am
ಕುಮಟಾ : ದೇಶದ ಜನತೆಗೆ ನೆಮ್ಮದಿಯ ಬದುಕು ನೀಡುವವರು ರೈತರು ಮತ್ತು ದೇಶವನ್ನು ರಕ್ಷಿಸುವವರು ಸೈನಿಕರು ಇಬ್ಬರ ಸೇವೆಯೂ ಶ್ಲಾಘನೀಯ ಎಂದು ಬೈಲಹೊಂಗಲ ಮೂರೂ ಸಾವಿರ ಮಠದ ಶ್ರೀ ಪ್ರಭು ನೀಲಕಂಠ ಸ್ವಾಮಿಗಳು ಹೇಳಿದರು.
Vijaya Karnataka Web prices for personality than person dinakara shetty
ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಬೆಲೆ ನೀಡಿ: ದಿನಕರ ಶೆಟ್ಟಿ


ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿ ಬಂಧು ಮತ್ತು ಸ್ವ ಸಹಾಯ ಸಂಘಗಳ ಒಕ್ಕೂಟ ಮಿರ್ಜಾನ ವಲಯ ಮತ್ತು ಸಾಮೂಹಿಕ ಶ್ರೀ ಶನೇಶ್ವರ ಪೂಜಾ ವ್ಯವಸ್ಥಾಪನಾ ಸಮಿತಿ ಮಿರ್ಜಾನ ಇವರ ಆಶ್ರಯದಲ್ಲಿ ನಡೆದ ಸಾಮೂಹಿಕ ಶ್ರೀ ಶನೇಶ್ವರ ಪೂಜಾ ಹಾಗೂ ಧಾರ್ಮಿಕ ಸಭಾಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಅಂತರಾತ್ಮದಲ್ಲಿ ದ್ವೇಷವನ್ನು ಇಟ್ಟುಕೊಂಡು ಯಾವುದೇ ಕೆಲಸ ಮಾಡಿದರೂ ಯಶಸ್ವಿಯಾಗುವುದಿಲ್ಲ. ನಮ್ಮಲ್ಲಿರುವ ಮೂಢನಂಬಿಕೆಯನ್ನು ಹೋಗಲಾಡಿಸಿ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜೆ ಮಾಡಿದಲ್ಲಿ ದೇವರು ಸಂತೃಪ್ತಿಗೊಳ್ಳುತ್ತಾನೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ದಿನಕರ ಶೆಟ್ಟಿ , ವ್ಯಕ್ತಿಗೆ ಬೆಲೆ ನೀಡುವ ಬದಲು ವ್ಯಕ್ತಿತ್ವಕ್ಕೆ ಬೆಲೆ ನೀಡಬೇಕು, ಕುಟುಂಬ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯ. ಆಸ್ತಿ ಸಂಪಾದನೆಗಾಗಿ ಹೋರಾಡುವದಕ್ಕಿಂತ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷ ಣ ಹಾಗೂ ಸಂಸ್ಕಾರವನ್ನು ನೀಡಿ ಆಸ್ತಿವಂತರನ್ನಾಗಿ ಬೆಳಸಿ ಎಂದು ಕರೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತರಕನ್ನಡ ಜಿಲ್ಲೆಯ ನಿರ್ದೇಶಕ ಶಂಕರ ಶೆಟ್ಟಿ ಮಾತನಾಡಿ, ದೇವರ ಪೂಜೆಯಿಂದ ಕುಟುಂಬದಲ್ಲಿ ಶಾಂತಿ ಹಾಗೂ ನೆಮ್ಮದಿ ವಾತಾವರಣ ಮೂಡುತ್ತದೆ ಎಂದು ತಿಳಿಸಿದರು. ಜಿಪಂ ಸದಸ್ಯ ಪ್ರದೀಪ್‌ ನಾಯಕ ಮಾತನಾಡಿದರು. ಮಂಜುನಾಥ ಹರಿಕಾಂತ್ರ ಅಧ್ಯಕ್ಷ ತೆ ವಹಿಸಿದ್ದರು.

ತಾಪಂ ಅಧ್ಯಕ್ಷೆ ವಿಜಯಾ ಪಟಗಾರ, ತಾಪಂ ಸದಸ್ಯ ಈಶ್ವರ ನಾಯ್ಕ, ಗ್ರಾಪಂ ಅಧ್ಯಕ್ಷೆ ನಾಗರತ್ನ ನಾಯ್ಕ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಕುಮಟಾ ತಾಲೂಕಿನ ಯೋಜನಾಧಿಕಾರಿ ನಾಗರಾಜ್‌ ನಾಯ್ಕ ಸ್ವಾಗತಿಸಿದರು. ಗಣೇಶ ಅಂಬಿಗ ವಂದಿಸಿದರು. ಚಂದ್ರಹಾಸ ನಾಯ್ಕ ನಿರೂಪಿಸಿದರು. ಶ್ರೀಮತಿ ಶಾಂತ ಆಚಾರಿ ಸಂಗಡಿಗರು ಪ್ರಾರ್ಥಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ