ಆ್ಯಪ್ನಗರ

ಕೆಲಸ ನೀಡಲು ಆಗ್ರಹಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಅಂಕೋಲಾ : ನಮಗೆ ಕೆಲಸ ಕೊಡಿ. ಕಳೆದ ಮೂರು ವರ್ಷಗಳಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದು ಏಕಾಏಕಿ ಹೊರ ದಬ್ಬಿದರೆ ನಿರ್ಗತಿಕರಾದ ನಾವೆಲ್ಲಿ ಹೋಗಬೇಕು. ಬೇಡಿಕೆ ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೊರಗುತ್ತಿಗೆ ನೌಕರರ ಸಂಘದ ರವಿಕಲಾ ಗುರವ ಹೇಳಿದರು.

Vijaya Karnataka 21 Jul 2019, 5:00 am
ಅಂಕೋಲಾ : ನಮಗೆ ಕೆಲಸ ಕೊಡಿ. ಕಳೆದ ಮೂರು ವರ್ಷಗಳಿಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದು ಏಕಾಏಕಿ ಹೊರ ದಬ್ಬಿದರೆ ನಿರ್ಗತಿಕರಾದ ನಾವೆಲ್ಲಿ ಹೋಗಬೇಕು. ಬೇಡಿಕೆ ಈಡೇರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೊರಗುತ್ತಿಗೆ ನೌಕರರ ಸಂಘದ ರವಿಕಲಾ ಗುರವ ಹೇಳಿದರು.
Vijaya Karnataka Web KWR-19ANK2


ತಾಲೂಕು ಆಸ್ಪತ್ರೆಯ ಎದುರು ವಜಾಗೊಂಡ ಹೊರಗುತ್ತಿಗೆ ಕಾರ್ಮಿಕರು ಶುಕ್ರವಾರ ಹಮ್ಮಿಕೊಂಡ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾವು ಮೂರು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಮಗೆ ಎಂಟು ತಿಂಗಳುಗಳಿಂದ ಯಾವುದೇ ಗೌರವಧನ ನೀಡಿಲ್ಲ. ನಮ್ಮನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಈಗ ಮನೆಗೆ ಹೋಗಿ ಎಂದರೆ ನಾವು ಜೀವನ ನಡೆಸುವುದು ಕಷ್ಟವಾಗಿದೆ. ನಮ್ಮ ಮಕ್ಕಳಿಗೆ ಶಿಕ್ಷ ಣ ಕೊಡಿಸಲು ಆಗುತ್ತಿಲ್ಲ ನಮಗೆ ನ್ಯಾಯ ಒದಗಿಸಿ ಎಂದು ಹೇಳಿದರು.

ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಬರುವವರೆಗೂ ನಮ್ಮ ಉಪವಾಸ ಧರಣಿ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಸ್ಥಳಕ್ಕಾಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಮಾತನಾಡಿ, ನನಗೆ ಧರಣಿ ನಿರತರ ಪರಿಸ್ಥಿತಿ ಅರ್ಥವಾಗುತ್ತದೆ. ಜು.30ರ ವರೆಗೆ ತಾಳ್ಮೆಯಿಂದಿರಿ. ನಿಮ್ಮ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇನೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಮೂರು ತಿಂಗಳ ಗೌರವಧನ ಕೊಡಿಸಲು ಪ್ರಯತ್ನಿಸುತ್ತೇನೆ. ಮತ್ತು ಹೊರಗುತ್ತಿಗೆ ಆಧಾರದಲ್ಲಿ ಈ ಮೊದಲು ನೇಮಕವಾಗಿರುವ ಎಲ್ಲರಿಗೂ ಅವಕಾಶ ಕಲ್ಪಿಸಲು ಪ್ರತ್ನಿಸುತ್ತೇನೆ ಎಂದರು.

ಪ್ರತಿಭಟನೆಯಲ್ಲಿ ನಿತ್ಯಾನಂದ ನಾಯ್ಕ, ಶೈಲಾ ಬಂಡಾರಿ, ಮಹೇಶ ನಾಯ್ಕ, ದಿವ್ಯಾ ನಾಯ್ಕ, ನೀಲಾ ಆಗೇರ, ಅಶ್ವಿನಿ ಹರಿಜನ್‌, ರಾಮಚಂದ್ರ ನಾಯ್ಕ, ಚೇತನಾ ಬಂಟ್‌, ಸವಿತಾ ಬಂಟ ಮತ್ತಿತರರು ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ