ಆ್ಯಪ್ನಗರ

ರಾಮಚಂದ್ರಾಪುರ ಮಠಕ್ಕೆ ಮತ್ತೊಂದು ಜಯ

ಗೋಕರ್ಣ : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯ ಹಾಗೂ ಪರಿವಾರ ದೇವಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಶ್ರೀ ರಾಮಚಂದ್ರಾಪುರ ಮಠಕ್ಕೆ ಮತ್ತೊಂದು ಜಯ ದೊರೆತಿದೆ.

Vijaya Karnataka 12 Jan 2019, 5:00 am
ಗೋಕರ್ಣ : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯ ಹಾಗೂ ಪರಿವಾರ ದೇವಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಶ್ರೀ ರಾಮಚಂದ್ರಾಪುರ ಮಠಕ್ಕೆ ಮತ್ತೊಂದು ಜಯ ದೊರೆತಿದೆ.
Vijaya Karnataka Web KWR-11 GKN 2 B


ಮಹಾಬಲೇಶ್ವರ ದೇವಾಲಯದ ಪಾಶ್ರ್ವದಲ್ಲಿರುವ ಆದಿ ಗೋಕರ್ಣ ದೇವಾಲಯ ಪುನರ್‌ ನಿರ್ಮಾಣಕ್ಕೆ ತಡೆ ನೀಡಬೇಕು ಎಂದು ಮಾಡಲಾಗಿದ್ದ ಮನವಿಯನ್ನು ತಿರಸ್ಕರಿಸಿರುವ ನ್ಯಾಯಾಲಯ, ನ್ಯಾಯಾಲಯದ ವೆಚ್ಚವನ್ನು ಶ್ರೀ ಮಠಕ್ಕೆ ಸಂದಾಯ ಮಾಡುವಂತೆ 2018ರ ಡಿ.14ರಂದು ಅರ್ಜಿದಾರರಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಆದಿ ಗೋಕರ್ಣ ದೇವಾಲಯ ಶಿಥಿಲವಾಗಿದ್ದ ಕಾರಣ, ಶ್ರೀ ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಪುನರ್‌ ನಿರ್ಮಾಣ ಕಾರ್ಯವನ್ನು 2014ರಲ್ಲಿ ಆರಂಭಿಸಲಾಗಿತ್ತು. ಇದಕ್ಕೆ ತಡೆ ನೀಡುವಂತೆ ಅರ್ಜಿದಾರರು 2012ರಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಕುಮಟಾದ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ತಡೆ ನೀಡುವಂತೆ ಮಾಡಲಾಗಿದ್ದ ಮೂಲ ದಾವೆಯನ್ನು ತಿರಸ್ಕರಿಸುವ ಜತೆಗೆ ಶ್ರೀ ಮಠಕ್ಕೆ ನ್ಯಾಯಾಲಯದ ವೆಚ್ಚವನ್ನೂ ನೀಡುವಂತೆ ಅರ್ಜಿದಾರರಿಗೆ ಆದೇಶ ಮಾಡಿದೆ.

ಆದಿಗೋಕರ್ಣ ದೇವಾಲಯ ಪುನರ್‌ ನಿರ್ಮಾಣಕ್ಕೆ ತಡೆ ಕೋರಿದವರಿಗೆ ಸಂರಕ್ಷ ಣೆಯ ಯಾವ ಉದ್ದೇಶವೂ ಇಲ್ಲ. ಶ್ರೀ ಮಠದ ಆಡಳಿತಕ್ಕೆ ತೊಂದರೆ ಕೊಡುವುದಷ್ಟೇ ಅರ್ಜಿದಾರರ ಉದ್ದೇಶವಾಗಿದೆ. ಶ್ರೀ ಮಠದ ಆಡಳಿತ ವಿರುದ್ಧ ಇರುವ ಉದ್ದೇಶವೇ ಈ ಅರ್ಜಿಗೆ ಮೂಲ ಕಾರಣ. 05.12.2018 ರಂದು ಅರ್ಜಿದಾರರು ಅರ್ಜಿಯನ್ನು ಹಿಂತೆಗೆದುಕೊಳ್ಳಲು ಸಲ್ಲಿಸಿದ್ದ ಮನವಿಯಿಂದಲೂ ಈ ದುರುದ್ದೇಶ ಸಾಬೀತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಠದ ಪರ ನ್ಯಾಯವಾದಿಗಳಾದ ಎಚ್‌.ವಿ.ಹೆಗಡೆ, ಪ್ರಶಾಂತ ನಾಯಕ ವಾದ ಮಂಡಿಸಿದ್ದರು.

ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ 2008ರ ಮೊದಲು ಯಾತ್ರಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯೂ ಇರಲಿಲ್ಲ. ಶ್ರೀಮಠವು ಉಚಿತ ಪ್ರಸಾದ ಭೋಜನ ವ್ಯವಸ್ಥೆ ಆರಂಭಿಸಿದಾಗ ಅದಕ್ಕೂ ನ್ಯಾಯಾಲಯದಿಂದ ತಡೆ ಇರುವ ಪ್ರಯತ್ನ ನಡೆದಿತ್ತು. ಆದರೆ ನ್ಯಾಯಾಲಯ ಆ ಅರ್ಜಿ ತಿರಸ್ಕರಿಸಿ ಉಚಿತ ಪ್ರಸಾದ ಭೋಜನಕ್ಕೆ ಅವಕಾಶ ನೀಡಿತ್ತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ