ಆ್ಯಪ್ನಗರ

ರೆಡ್‌ ಅಲರ್ಟ್‌ ಘೋಷಣೆ

ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಎಡೆಬಿಡದ ಮಳೆಯಿಂದ ಭಟ್ಕಳ, ಹೊನ್ನಾವರ, ಮತ್ತು ಕಾರವಾರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಿದೆ.

Vijaya Karnataka 23 Jul 2019, 5:00 am
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಎಡೆಬಿಡದ ಮಳೆಯಿಂದ ಭಟ್ಕಳ, ಹೊನ್ನಾವರ, ಮತ್ತು ಕಾರವಾರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹವಾಮಾನ ಇಲಾಖೆ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಿದೆ.
Vijaya Karnataka Web red alert declaration
ರೆಡ್‌ ಅಲರ್ಟ್‌ ಘೋಷಣೆ


ಭಾನುವಾರ ಸಂಜೆಯಿಂದಲೆ ಮಳೆ ಸುರಿಯತೊಡಿದ್ದು ಸೋಮವಾರ ಮಧ್ಯಾಹ್ನದ ಬಳಿಕ ಮಳೆಯ ಆರ್ಭಟ ಹೆಚ್ಚಿದೆ. ಕೆಲ ಭಾಗದಲ್ಲಿ ಮರ ಹಾಗು ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಇದೇ ರೀತಿ ಮಳೆ ಮಳೆ ಮುಂದುವರಿದಲ್ಲಿ ಕೆಲವೆಡೆ ಜನವಸತಿ ಪ್ರದೇಶಗಳು ಜಲಾವೃತ್ತವಾಗುವ ಆತಂಕ ಎದುರಾಗಿದೆ. ಕಾರವಾರ ತಾಲೂಕಿನ ಗ್ರಾಮೀಣ ಭಾಗದಲ್ಲಿಯೂ ಅತಿ ಹೆಚ್ಚು ಮಳೆಯಾಗಿದ್ದು, ಕೆಲ ಶಾಲೆಗಳಿಗೆ ಮಧ್ಯಾಹ್ನದಿಂದಲೇ ರಜೆ ನೀಡಲಾಯಿತು.

ತಪ್ಪಿದ ಅನಾಹುತ: ನಗರದ ಮೆಸ್ತಾ ರಸ್ತೆಯಲ್ಲಿ ವಿದ್ಯುತ್‌ ತಂತಿ ಮೇಲೆ ಮರವೊಂದು ಬಿದ್ದಿರುವ ಪರಿಣಾಮ ವಿದ್ಯುತ್‌ ಕಂಬ ಸಮೇತ ತಂತಿ ರಸ್ತೆಯಲ್ಲಿ ಬಿದ್ದಿತು.ಅದೃಷ್ಟವಶಾತ್‌ ಆ ಸಂದರ್ಭದಲ್ಲಿ ರಸ್ತೆಯಲ್ಲಿ ಜನರ ಓಡಾಟ ಇಲ್ಲಿದಿರುವುದುರಿಂದ ದೊಡ್ಡ ಅನಾಹುತ ತಪ್ಪಿದೆ. ಸ್ಥಳಕ್ಕೆ ಆಗಮಿಸಿದ ಹೆಸ್ಕಾಂ ಸಿಬ್ಬಂದಿ ವಿದ್ಯುತ್‌ ತಂತಿ ತೆರವುಗೊಳಿಸಿದರು.

ಹೆದ್ದಾರಿ ಸಂಚಾರಕ್ಕೆ ವ್ಯತ್ಯಯ: ಮಳೆಯೊಂದಿಗೆ ಬೀಸಿದ ಗಾಳಿಯಿಂದ ಹೊನ್ನಾವರ ತಾಲೂಕಿನ ಕರ್ಕಿ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೃಹತ್‌ ಗಾತ್ರದ ಆಲದ ಮರ ನೆಲಕ್ಕುರುಳಿದ್ದು, ಕೆಲ ಹೊತ್ತು ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಅರಣ್ಯ ಇಲಾಖೆ ಮತ್ತು ಪೊಲೀಸ್‌ಇಲಾಖೆಯ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆಬಿದ್ದಿರುವ ಮರ ತೆರವುಗೊಳಿಸಲಾುತು.

ಮಾರುಕಟ್ಟೆ ಜಲಾವೃತ: ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿನ ಮಾರುಕಟ್ಟೆಯಲ್ಲಿ ಮಳೆ ನೀರಿನಿಂದ ಜಲಾವೃತಗೊಂಡಿದ್ದು, ಮಧ್ಯಾಹ್ನದಿಂದ ಸಂಜೆಯವರೆಗೂ ಮಾರುಕಟ್ಟೆಯಲ್ಲಿ ನೀರು ತುಂಬಿಕೊಂಡಿರುವುದರಿಂದ ವ್ಯಾಪರಕ್ಕೆ ಅಡ್ಡಿಯಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ