ಆ್ಯಪ್ನಗರ

ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ: ವೈಎಸ್‌ವಿ ದತ್ತ

ಹೊನ್ನಾವರ : ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಿಗುತ್ತದೆ ಎಂದು ಕಡೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

Vijaya Karnataka 23 Dec 2018, 5:00 am
ಹೊನ್ನಾವರ : ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಿಗುತ್ತದೆ ಎಂದು ಕಡೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.
Vijaya Karnataka Web KWR-22 HNR 4


ತಾಲೂಕಿನ ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 2 ದಿನಗಳ ಕಾಲ ನಡೆದ 67ನೇ ವಾರ್ಷಿಕ ವರ್ದಂತಿ ಉತ್ಸವದಲ್ಲಿ ಶುಕ್ರವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಧಾರ್ಮಿಕ ಕೇಂದ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ. ಇದರ ಅಭಿವೃದ್ದಿಗೆ ಶ್ರಮಿಸುವ ಮೂಲಕ ಮುಂದಿನ ಪೀಳಿಗೆಗೆ ಕೊಡುಗೆ ನೀಡುವ ಕೆಲಸ ಆಗಬೇಕು ಎಂದರು.

ತಾಲೂಕು ಆಸ್ಪತ್ರೆಯ ಜನರಲ್‌ ಸರ್ಜನ್‌ ಮಂಜುನಾಥ ಶೆಟ್ಟಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಪಗಾಲ ನಾಗರಾಜ ಹೆಗಡೆ ಮಾತನಾಡಿ, ಸಮಾಜಕ್ಕೆ ಕೊಡುಗೆ ನೀಡಿರುವದನ್ನು ಗುರುತಿಸಿ ಗೌರವಿಸಿದ ಉತ್ಸವದ ಕಾರ್ಯ ಪ್ರಶಂಸನೀಯ ಎಂದರು.

ವೇದಿಕೆಯಲ್ಲಿ ಜೆಡಿಎಸ್‌ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಹೆಗಡೆ, ದುರ್ಗಾಂಬ ಚಾರಿಟೇಬಲ್‌ ಮುಖ್ಯ ಟ್ರಸ್ಟಿ ರಾಮಕೃಷ್ಣ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಶಿಕ್ಷ ಣ ಮತ್ತು ಕಲಾ ವಿಭಾಗದಲ್ಲಿ ಸಾಧನೆ ಮಾಡಿದ 6 ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ನಿವೃತ್ತ ಸೈನಿಕರಾದ ರಾಜು ನಾಯ್ಕ, ಜನಪದ ಹಾಡುಗಾರ್ತಿ ಮುಗುಳಿಯ ಸಣ್ಣಮ್ಮ ನಾಯ್ಕ, ಹಾರ್ಮೊನಿಯಂ ವಾದಕ ಇಡಗುಂಜಿಯ ಹರಿಶ್ಚಂದ್ರ ನಾಯ್ಕ, ಜೇಮ್ಸ ಪೆದ್ರ ಲೋಫಿಸ್‌, ನಿವೃತ್ತ ಉಪತಹಸೀಲ್ದಾರ ಹನುಮಂತ ನಾಯ್ಕ, ಮರಕಸಬುದಾರ ನಾಗೇಶ ನಾಯ್ಕ, ಕೃಷಿಕ ಈಶ್ವರ ನಾಯ್ಕ ಇವರನ್ನು ಸನ್ಮಾನಿಸಲಾಯಿತು.

ದಯಾನಂದ ನಾಯ್ಕ ಸ್ವಾಗತಿಸಿದರು. ಸುರೇಶ ನಾಯ್ಕ ವರದಿ ವಾಚಿಸಿದರು. ಶಿಕ್ಷ ಕ ಆನಂದ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ನಂತರ ಅನ್ನಸಂತರ್ಪಣಿ ನೆರವೇರಿತು. ಹುಡಗೋಡ ಕಲಾಶ್ರೀ ಯಕ್ಷ ಮಿತ್ರಮಂಡಳಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಮಾಯಾಬಜಾರ ಪೌರಾಣಿಕ ಯಕ್ಷ ಗಾನ ಪ್ರದರ್ಶನ ನಡೆಯಿತು,

ಧಾರ್ಮಿಕ ಕಾರ್ಯ: ಎರಡು ದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಾಮೂಹಿಕ ಸತ್ಯನಾರಾಯಣ ವೃತ, ನವಚಂಡಿ ಹವನ, ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳನ್ನು ವಿದ್ವಾನ ಕಟ್ಟೆ ತಿಮ್ಮಣ್ಣ ಭಟ್‌ ಆಚಾರ್ಯತ್ವದಲ್ಲಿ ನೇರವೇರಿಸಲಾಯಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ