ಯಲ್ಲಾಪುರ: ಪಟ್ಟಣದ ಬಸ್ ನಿಲ್ದಾಣದ ಆವಾರದಲ್ಲಿರುವ ಶ್ರೀಚೌಡೇಶ್ವರಿ ದೇವಾಲಯದಲ್ಲಿವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳು ಮಂಗಳವಾರ ಸಂಪನ್ನಗೊಂಡಿತು.
ಈ ಪ್ರಯುಕ್ತ ನವಚಂಡಿ ಹವನ, ಸಪ್ತಶತಿ ಪಾರಾಯಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸೋಮವಾರ ಬೆಳಗ್ಗೆ ಗಣಪತಿ ಪೂಜೆ, ಪುಣ್ಯಾಹ, ಮಹಾಸಂಕಲ್ಪ ನಡೆಸಲಾಯತು. ಮಂಗಳವಾರ ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಪ್ರಯುಕ್ತ ಶ್ರೀದೇವರಿಗೆ ಆಭರಣ ಹಾಗೂ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಈ ಪ್ರಯುಕ್ತ ನವಚಂಡಿ ಹವನ, ಸಪ್ತಶತಿ ಪಾರಾಯಣೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸೋಮವಾರ ಬೆಳಗ್ಗೆ ಗಣಪತಿ ಪೂಜೆ, ಪುಣ್ಯಾಹ, ಮಹಾಸಂಕಲ್ಪ ನಡೆಸಲಾಯತು. ಮಂಗಳವಾರ ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಪ್ರಯುಕ್ತ ಶ್ರೀದೇವರಿಗೆ ಆಭರಣ ಹಾಗೂ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.