ಆ್ಯಪ್ನಗರ

ಬೇಡಿಕೆ ಈಡೇರಿಕೆಗೆ ಮನವಿ

ಮುಂಡಗೋಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದವರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಗುರುವಾರ ಮನವಿ ಸಲ್ಲಿಸಿದರು.

Vijaya Karnataka 29 Mar 2019, 5:00 am
ಮುಂಡಗೋಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದವರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಗುರುವಾರ ಮನವಿ ಸಲ್ಲಿಸಿದರು.
Vijaya Karnataka Web request for fulfillment of demand
ಬೇಡಿಕೆ ಈಡೇರಿಕೆಗೆ ಮನವಿ


ಉದ್ಯೋಗ ಖಾತ್ರಿ ಯೋಜನೆಯಡಿ ಒಬ್ಬ ಕೂಲಿಕಾರನಿಗೆ ಕೆಲಸ ನಿಗದಿಪಡಿಸದೆ ಅವನು ಕೇಳಿದಷ್ಟು ಕೂಲಿ ಕೆಲಸ ನೀಡಬೇಕು. ಕೂಲಿ ಕೆಲಸ ಮಾಡಿದವರಿಗೆ ವಾರಕ್ಕೂಮ್ಮೆ ಕೂಲಿ ವೇತನ ನೀಡಬೇಕು. ಕೆಲಸ ಮಾಡಿರುವುದನ್ನು ಕೂಲಿಕಾರರ ಎದುರು ಅಳತೆ ಮಾಡಬೇಕು. ವೃದ್ಧರಿಗೆ, ವಿಶೇಷಚೇತನರಿಗೆ ಶೇ.30ರಷ್ಟು ಕೆಲಸದ ಪ್ರಮಾಣ ನಿಗದಿಪಡಿಸಬೇಕು. ಬರಪೀಡಿತ ಪ್ರದೇಶಗಳಲ್ಲಿ ವರ್ಷಕ್ಕೆ 250ದಿನ ಕೂಲಿ ಕೆಲಸ ನೀಡಬೇಕು. ಕೆಲಸ ನೀಡದಿದ್ದರೆ ನಿರುದ್ಯೋಗ ಭತ್ಯೆ ನೀಡಬೇಕು. 30ದಿನದ ಕೆಲಸಕ್ಕೆ ಕನಿಷ್ಟ 18ಸಾವಿರ ರೂ. ವೇತನ ನೀಡಬೇಕು. 100ದಿನ ಕೂಲಿ ಕೆಲಸ ಮಾಡಿದವರಿಗೆ ಬಹುಮಾನ ವಿತರಿಸಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಕೂಲಿಕಾರರ ಸಂಘದ ಅಧ್ಯಕ್ಷ ಭೀಮಣ್ಣ ಭೋವಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ