ಆ್ಯಪ್ನಗರ

ನೀರಿಗೆ 11.40ಕೋಟಿ ರೂ. ಬಿಡುಗಡೆ

ಕಾರವಾರ : ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೆಕೆಗೆ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ನೀರು ಪೂರೆಕೆಯಲ್ಲಿ ಕರ್ತವ್ಯ ಲೋಪ ಎಸಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.

ವಿಕ ಸುದ್ದಿಲೋಕ 7 Apr 2016, 4:00 am
ಕಾರವಾರ : ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೆಕೆಗೆ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ನೀರು ಪೂರೆಕೆಯಲ್ಲಿ ಕರ್ತವ್ಯ ಲೋಪ ಎಸಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web rs 11 40 crore in the water release
ನೀರಿಗೆ 11.40ಕೋಟಿ ರೂ. ಬಿಡುಗಡೆ


ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ವಿಶೇಷ ಪರಿಶೀಲನೆ ಸಭೆ ನಡೆಸಿದರು.

ಕುಡಿಯುವ ನೀರಿನ ಕಾಮಗಾರಿಗೆ ಮಾರ್ಚ್ ಕೊನೆಯ ವರೆಗೆ ಜಿಲ್ಲೆಗೆ 11.40ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 7.27ಕೋಟಿ ರೂ. ವೆಚ್ಚ ಮಾಡಲಾಗಿದೆ. ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳ್ಳದಿರುವ ಅಥವಾ ಅನಿವಾರ್ಯವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು 4.50ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ಕುಡಿಯುವ ನೀರಿನ ಕಾಮಗಾರಿಗೆ 1.50ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರತಿ ತಹಸೀಲ್ದಾರ ಬಳಿ ಕನಿಷ್ಟ 20 ಲಕ್ಷ ರೂ, ಪ್ರತಿ ನಗರಸ್ಥಳೀಯ ಸಂಸ್ಥೆಗಳಲ್ಲಿ 30ಲಕ್ಷ ರೂ ಲಭ್ಯವಿದೆ. ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಕುಡಿಯುವ ನೀರಿನ ಕಾಮಗಾರಿಗೆ ಪ್ರಥಮ ಆದ್ಯತೆ ಒದಗಿಸಬೇಕು ಎಂದರು.

ಮೋಟಾರ್, ಪಂಪ್‌ಗಳನ್ನು ತಕ್ಷಣಕ್ಕೆ ಪೂರೆಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿನಲ್ಲಿ ಮೋಟಾರ್ ಬ್ಯಾಂಕ್‌ಗಳನ್ನು ಸ್ಥಾಪಿಸಲು ಈಗಾಗಲೇ ಸೂಚಿಸಲಾಗಿದೆ. ಇದರಂತೆ ಕೆಲವು ತಾಲೂಕುಗಳಲ್ಲಿ ಆರಂಭವಾಗಿದೆ. ಎಲ್ಲ ತಾಲೂಕುಗಳಲ್ಲಿ ಆರಂಭಿಸಬೇಕು. ಹೊನ್ನವಾರ-ಕುಮಟಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಕುಡಿಯುವ ನೀರಿನ 75 ರೂ. ಮೊತ್ತದ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಇಲ್ಲಿರುವ ನೀರು ಶುದ್ಧೀಕರಣ ಘಟಕದ ರಿಪೇರಿಗೆ 1.07ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.

ಕೇಂದ್ರಸ್ಥಾನದಲ್ಲಿರಬೇಕು: ಗ್ರಾಮೀಣ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದವರೆಗಿನ ಅಧಿಕಾರಿಗಳು ಜೂನ್ 1ರ ತನಕ ಕೇಂದ್ರಸ್ಥಾನ ಬಿಡಬಾರದು. ಅನಿವಾರ್ಯ ಸಂದರ್ಭದಲ್ಲಿ ಅನುಮತಿ ಪಡೆದು ಬಿಡಬಹುದು. ಕುಡಿಯುವ ನೀರಿನ ಕುರಿತು ಅಹವಾಲು ಬಂದ ತಕ್ಷಣ ಅದಕ್ಕೆ ಸ್ಪಂದಿಸಬೇಕು. ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಶಾಸಕರಾದ ಸತೀಶ್ ಸೆಲ್, ಮಂಕಾಳ ವೆದ್ಯ, ಶಿವರಾಮ ಹೆಬ್ಬಾರ್, ಶಾರದಾ ಶೆಟ್ಟಿ, ಘೋಟ್ನೇಕರ್, ಪ್ರಭಾರ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್, ಪೊಲೀಸ್ ವರಿಷ್ಠಾಧಿಕಾರಿ ವಂಶಿಕಷ್ಣ ಮತ್ತಿತರರು ಉಪಸ್ಥಿತರಿದ್ದರು.

------- ಉದ್ಯೋಗ ಮೇಳ ನಡೆಸಲು ನಿರ್ಧಾರ ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಉದ್ಯೋಗ ಮೇಳ ನಡೆಸಲು ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲೆಯಲ್ಲಿ ಕೆಗಾರಿಕೆ ಅಭಿವದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮ ಘೋಷಿಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ