ಆ್ಯಪ್ನಗರ

ವಿಜ್ಞಾನ ನಾಟಕ ಸ್ಪರ್ಧೆ ಜ್ಞಾನ ವೃದ್ಧಿಗೆ ಸಹಕಾರಿ

ಅಂಕೋಲಾ : ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದು ಹಿರಿಯ ಸಾಹಿತಿ ವಿಷ್ಣು ನಾಯ್ಕ ಹೇಳಿದರು.

Vijaya Karnataka 14 Dec 2022, 2:14 pm
ಅಂಕೋಲಾ : ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದು ಹಿರಿಯ ಸಾಹಿತಿ ವಿಷ್ಣು ನಾಯ್ಕ ಹೇಳಿದರು.
Vijaya Karnataka Web Science


ಅವರು ಪಟ್ಟಣದ ಗೋಖಲೆ ಸೆಂಟನರಿ ಕಾಲೇಜಿನ ಯುಜಿಸಿ ಸಭಾಭವನದಲ್ಲಿ ಕಾರವಾರ ಜಿಲ್ಲೆ ಪದವಿ ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ನೂರು ಪುಸ್ತಕಗಳ ಸಾರವನ್ನು ಪ್ರೇಕ್ಷ ಕರ ಮಸ್ತಕದಲ್ಲಿ ಮನದಟ್ಟು ಮಾಡುವ ಅದ್ಭುತ ಶಕ್ತಿ ನಾಟಕ ಕಲೆಯಲ್ಲಿ ಅಡಗಿದೆ. ಕಲೆ ಮತ್ತು ವಿಜ್ಞಾನದ ನಡುವೆ ನಿಕಟವಾದ ಸಂಬಂಧವಿದ್ದು ಆಯೋಜಿಸಿರುವ ವಿಜ್ಞಾನ ನಾಟಕ ಸ್ಪರ್ಧೆ ವಿದ್ಯಾರ್ಥಿಗಳಿಗೆ ಜ್ಞಾನದ ಪ್ರಭೆಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಪಾತ್ರ ವಹಿಸುತ್ತದೆ ಎಂದರು.

ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ಬಿ.ಗುಡಸಿ ಮಾತನಾಡಿ, ಮಾಹಿತಿ ತಂತ್ರಜ್ಞಾನದ ಕೊಡುಗೆಯನ್ನು ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮ್ಮದು. ಆದರೆ ತಂತ್ರಜ್ಞಾನಕ್ಕೆ ಅವಶ್ಯವಿರುವ ಉತ್ಪನ್ನಗಳಿಗಾಗಿ ಬೇರೆ ದೇಶಗಳ ಮೇಲೆ ಇನ್ನೂ ಅವಲಂಬಿತರಾಗಿದ್ದೇವೆ. ಸಾಧನೆ ಕೇವಲ ನಿಂತ ನೀರಾಗದೇ ಹರಿವ ತೊರೆಯಾಗಬೇಕು. ಕಲಿಕೆ ಕೇವಲ ಅಂಕ ಗಳಿಕೆಗೆ ಸೀಮಿತಗೊಳ್ಳದೇ ಜ್ಞಾನವನ್ನು ವೃದ್ಧಿಸಿಕೊಳ್ಳುವ ಪರಿಪೂರ್ಣ ಸಾಧನವಾಗಬೇಕು ಎಂದು ಹೇಳಿದರು.

ಜಿ.ಸಿ.ಕಾಲೇಜಿನ ಪ್ರಾಚಾರ್ಯ ಡಾ.ಇಮ್ತಿಯಾಜ್‌ ಅಹ್ಮದ್‌ ಖಾನ್‌ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಆಯೋಜಿಸುವಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಹಾಗೂ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕೊಡುಗೆ ಅಪಾರವಾಗಿದೆ. ಜಿಲ್ಲೆಯ ಏಳು ತಂಡಗಳು ಪಾಲ್ಗೊಂಡಿವೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯ ಸಂಚಾಲಕ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್‌.ವಿ.ವಸ್ತ್ರದ ಪ್ರಾಸ್ತಾವಿಕ ಮಾತನಾಡಿದರು.

ಸ್ನೇಹಲ್‌ ನಾಯ್ಕ ನಿರೂಪಿಸಿದರು. ಕಾರ್ಯದರ್ಶಿ ಪ್ರೊ.ಡಿ.ಪಿ.ಕುಚಿನಾಡ ವಂದಿಸಿದರು. ನಾಟಕ ಸ್ಪರ್ಧೆಯ ನಿರ್ಣಾಯಕರಾಗಿ ನಿವೃತ್ತ ಪ್ರಾಚಾರ್ಯ ಡಾ.ರಾಮಕೃಷ್ಣ ಗುಂದಿ, ಪ್ರೊ.ಎಂ.ಎಸ್‌.ಹಬ್ಬು, ಖ್ಯಾತ ನಾಟಕ ನಿರ್ದೇಶಕ ಅನಂತ ನಾಯ್ಕ ಪಾಲ್ಗೊಂಡಿದ್ದರು.

ಫಲಿತಾಂಶ : ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಒಟ್ಟು 7 ತಂಡಗಳು ಪಾಲ್ಗೊಂಡಿದ್ದವು. ಇವುಗಳಲ್ಲಿ ಎಂ.ಇ.ಎಸ್‌. ಕಾಲೇಜು ಶಿರಸಿ ಪ್ರಥಮ ಪ್ರಥಮ ದರ್ಜೆ ಕಾಲೇಜು ಪೂಜಗೇರಿ ದ್ವಿತೀಯ, ಜಿ.ಸಿ. ಕಾಲೇಜು ಅಂಕೋಲಾ ತೃತೀಯ ಬಹುಮಾನ ಪಡೆದುಕೊಂಡರು.

ಅತ್ಯುತ್ತಮ ನಟ, ನಿರ್ದೇಶಕ, ಕಥೆ ಪ್ರಶಸ್ತಿಯೊಂದಿಗೆ ಶಿರಸಿಯ ಎಂ.ಇ.ಎಸ್‌. ಕಾಲೇಜಿನ ಪ್ರಣವ ಭಾರದ್ವಾಜ ಪಡೆದುಕೊಂಡರೆ, ಪೂಜಗೇರಿ ಪ್ರಥಮ ದರ್ಜೆ ಕಾಲೇಜಿನ ಐಶ್ವರ್ಯ ನಾಯ್ಕ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ