ಶಿರಸಿ/ಯಲ್ಲಾಪುರ :ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಶಿರಸಿಯಲ್ಲಿ ಹುಬ್ಬಳ್ಳಿ ಮಾರ್ಗದ ಚಿಪಗಿ ಸಮೀಪ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳೀಯ ಕಸ್ತೂರಬಾ ನಗರದ ಕೃಷ್ಣಮೂರ್ತಿ ಪಿ.ತಡಸ (46) ಹಾಗೂ ಅವರ ಪುತ್ರಿ ಅಪೂರ್ವಾ ಕೃಷ್ಣಮೂರ್ತಿ ತಡಸ (14) ಕೊನೆಯುಸಿರೆಳೆದಿದ್ದಾರೆ. ಇನ್ನೊಬ್ಬ ದೀಪಾ ಕೃಷ್ಣಮೂರ್ತಿ ತಡಸ (20) ತೀವ್ರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಬಸ್ಸಿನ ಅಡಿ ಹೋಗಿ ಬಿದ್ದಿತ್ತು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯರಿಬ್ಬರ ದುರ್ಮರಣ
ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಶಿರಸಿ ತಾಲೂಕಿನ ದೇವನಹಳ್ಳಿಯ ದೇವಿ ಜಾಯು ಮರಾಠೆ (50) ಹಾಗೂ ಸುಮನಾ ಮಂಜುನಾಥ ಮರಾಠೆ (19) ಮೃತರು. ಇವರು ಮಾರುತಿ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡ ಇವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಜುನಾಥ ಜಾಯು ಮರಾಠೆ, ಗೋವಿಂದ ಪಾಯು ಮರಾಠೆ, ನಾಗರಾಜ ತಿಮ್ಮಾ ಬಡಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಯಲ್ಲಾಪುರ ಸಿಪಿಐ ಡಾ. ಮಂಜುನಾಥ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಯಲ್ಲಾಪುರದಿಂದ ಕಿರವತ್ತಿ ಕಡೆ ಹೋಗುತ್ತಿದ್ದ ಲಾರಿ ಹಾಗೂ ಕಿರವತ್ತಿಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಶಿರಸಿಯಲ್ಲಿ ಹುಬ್ಬಳ್ಳಿ ಮಾರ್ಗದ ಚಿಪಗಿ ಸಮೀಪ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳೀಯ ಕಸ್ತೂರಬಾ ನಗರದ ಕೃಷ್ಣಮೂರ್ತಿ ಪಿ.ತಡಸ (46) ಹಾಗೂ ಅವರ ಪುತ್ರಿ ಅಪೂರ್ವಾ ಕೃಷ್ಣಮೂರ್ತಿ ತಡಸ (14) ಕೊನೆಯುಸಿರೆಳೆದಿದ್ದಾರೆ. ಇನ್ನೊಬ್ಬ ದೀಪಾ ಕೃಷ್ಣಮೂರ್ತಿ ತಡಸ (20) ತೀವ್ರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಬಸ್ಸಿನ ಅಡಿ ಹೋಗಿ ಬಿದ್ದಿತ್ತು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆಯರಿಬ್ಬರ ದುರ್ಮರಣ
ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಶಿರಸಿ ತಾಲೂಕಿನ ದೇವನಹಳ್ಳಿಯ ದೇವಿ ಜಾಯು ಮರಾಠೆ (50) ಹಾಗೂ ಸುಮನಾ ಮಂಜುನಾಥ ಮರಾಠೆ (19) ಮೃತರು. ಇವರು ಮಾರುತಿ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡ ಇವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಜುನಾಥ ಜಾಯು ಮರಾಠೆ, ಗೋವಿಂದ ಪಾಯು ಮರಾಠೆ, ನಾಗರಾಜ ತಿಮ್ಮಾ ಬಡಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಯಲ್ಲಾಪುರ ಸಿಪಿಐ ಡಾ. ಮಂಜುನಾಥ ನಾಯಕ ಭೇಟಿ ನೀಡಿ ಪರಿಶೀಲಿಸಿದರು.
ಯಲ್ಲಾಪುರದಿಂದ ಕಿರವತ್ತಿ ಕಡೆ ಹೋಗುತ್ತಿದ್ದ ಲಾರಿ ಹಾಗೂ ಕಿರವತ್ತಿಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ