ಆ್ಯಪ್ನಗರ

ಮಾದರಿಯಾಗಿಸಲು ಸೋಂದಾ ಗ್ರಾಪಂಗೆ ನೆರವು

ಶಿರಸಿ : ಮೂರು ಮಠಗಳ ವ್ಯಾಪ್ತಿ ಹೊಂದಿರುವ ಶ್ರೀ ಕ್ಷೇತ್ರ ಸೋಂದಾ ಗ್ರಾಮ ಪಂಚಾಯಿತಿಯನ್ನು ರಾಜ್ಯದಲ್ಲೇ ಮಾದರಿ ಗ್ರಾಪಂನ್ನಾಗಿ ಮಾಡಲು ಎಲ್ಲರೀತಿಯ ಸಹಕಾರ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

Vijaya Karnataka 22 Jan 2020, 5:00 am
ಶಿರಸಿ : ಮೂರು ಮಠಗಳ ವ್ಯಾಪ್ತಿ ಹೊಂದಿರುವ ಶ್ರೀ ಕ್ಷೇತ್ರ ಸೋಂದಾ ಗ್ರಾಮ ಪಂಚಾಯಿತಿಯನ್ನು ರಾಜ್ಯದಲ್ಲೇ ಮಾದರಿ ಗ್ರಾಪಂನ್ನಾಗಿ ಮಾಡಲು ಎಲ್ಲರೀತಿಯ ಸಹಕಾರ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.
Vijaya Karnataka Web sonda grapham to help model
ಮಾದರಿಯಾಗಿಸಲು ಸೋಂದಾ ಗ್ರಾಪಂಗೆ ನೆರವು


47ಲಕ್ಷ ರೂ.ವೆಚ್ಚದಲ್ಲಿನಿರ್ಮಿಸಲಾದ ತಾಲೂಕಿನ ಸೋಂದಾ ಗ್ರಾಪಂ ನೂತನ ಕಟ್ಟಡವನ್ನು ಸೋಮವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ಇಲ್ಲಿನ ಗ್ರಾಪಂ ಸದಸ್ಯರು, ಜಿಪಂ, ತಾಪಂ ಸದಸ್ಯರು ಕುಳಿತು ಗ್ರಾಪಂ ಆಗಬೇಕಾದ ಕೆಲಸಗಳ ಬಗ್ಗೆ ಪಟ್ಟಿ ಮಾಡಿ ನೀಡಿದರೆ ಅದಕ್ಕೆ ನೆರವು ನೀಡುವುದಾಗಿ ತಿಳಿಸಿದರು.

ಕುಡಿಯುವ ನೀರು, ರಸ್ತೆ, ದೀಪಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಹೆಚ್ಚಿನ ಅನುದಾನ ನೀಡಬಹುದು. ಆದರೆ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಗ್ರಾಪಂಗಳ ಜವಾಬ್ದಾರಿ ದೊಡ್ಡದಿದೆ. ಆ ನಿಟ್ಟಿನಲ್ಲಿಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಬಲ ತುಂಬುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.

ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಉತ್ತಕನ್ನಡ ಜಿಲ್ಲೆಯ 20 ಗ್ರಾಪಂಗಳಲ್ಲಿಘನತ್ಯಾಜ್ಯ ವಿಲೇವಾರಿ ಘಟಕ ಕಾರ್ಯ ಆರಂಭಗೊಂಡಿದೆ. ಅದಕ್ಕೆ 20ಲಕ್ಷ ರೂ.ಗಳನ್ನು ಈಗಾಗಲೇ ನೀಡಲಾಗಿದೆ. ಇನ್ನೂ 75ಗ್ರಾಪಂಗಳಲ್ಲಿಘಟಕ ನಿರ್ಮಿಸಲು ಜಿಲ್ಲಾಧಿಕಾರಿ ಜಾಗದ ಸೌಲಭ್ಯ ಸಹ ಒದಗಿಸಿದ್ದಾರೆ ಎಂದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೀಡಿರುವ ಹಣ ಯಾವುದಕ್ಕೂ ಸಾಲದಾಗಿದೆ. ಆದರೆ ಹೊಸ ಸರಕಾರ ಬಂದ ನಂತರ ಶಿರಸಿ ಹಾಗೂ ಸಿದ್ದಾಪುರ ಹೆಚ್ಚಿನ ಅನುದಾನ ಬಂದಿದೆ. ಹೊಸ ಪಂಚಾಯತಿಗಳಿಗೆ ರಾಜ್ಯ ಸರಕಾರದಿಂದ 10ಲಕ್ಷ ರೂ.ಅನುದಾನ ಬಿಡುಗಡೆ ಬಾಕಿ ಇದೆ. ಇ-ಸ್ವತ್ತು ಸಮಸ್ಯೆ, ವಸತಿ ಯೋಜನೆ ತಾಂತ್ರಿಕ ಗೊಂದಲ ಬಗೆಹರಿಸಲು ಸೂಕ್ತ ನಿರ್ದೇಶನ ನೀಡಬೇಕು ಎಂದರು.

ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್‌ ಪಾಟೀÇ, ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಜಿಪಂ ಸದಸ್ಯರಾದ ಉಷಾ ಹೆಗಡೆ, ಜಿ.ಎನ್‌ ಹೆಗಡೆ ಮುರೇಗಾರ್‌, ತಾಪಂ ಸದಸ್ಯ ನರಸಿಂಹ ಹೆಗಡೆ, ರವಿ ಹೆಗಡೆ ಹಳದೋಟ, ತಹಶೀಲ್ದಾರ ಎಮ್‌.ಆರ್‌ ಕುಲಕರ್ಣಿ ಉಪಸ್ಥಿತರಿದ್ದರು. ಗ್ರಾಪಂ ಅಧ್ಯಕ್ಷ ಮಂಜುನಾಥ ಭಂಡಾರಿ ಸ್ವಾಗತಿಸಿದರು. ನಾಗರಾಜ ಜೋಶಿ ಸೋಂದಾ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ