ಆ್ಯಪ್ನಗರ

ಕಾಣೆಯಾದ ಮೀನುಗಾರರ ಬಗ್ಗೆ ರಾಜ್ಯ ಸರಕಾರ ನಿರ್ಲಕ್ಷ್ಯ; ಸಚಿವ ಅನಂತಕುಮಾರ ಖಂಡನೆ

ಈಗಾಗಲೇ ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯ ಸರಕಾರಗಳ ಜೊತೆ ಮಾತನಾಡಿದ್ದು, ಅಲ್ಲಿಯ ಸರಕಾರವು ಸಹ ಹುಡುಕುವ ಪ್ರಯತ್ನದಲ್ಲಿ ತೊಡಗಿದೆ ಎಂದು ಸಚಿವರುತಿಳಿಸಿದ್ದಾರೆ.

Vijaya Karnataka Web 4 Jan 2019, 9:00 pm
ಶಿರಸಿ: ಮಲ್ಪೆಯ ಸುವರ್ಣ ತ್ರಿಭುಜ ಹೆಸರಿನ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿದ 8 ಮೀನುಗಾರರು ಡಿ. 13 ರಂದು ಕಣ್ಮರೆಯಾಗಿರುವುದರ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ಬಂದರೂ ಆ ವಿಷಯದ ಬಗೆಗಿನ ನಿರ್ಲಕ್ಷ್ಯ, ಹಾಗು ಉದಾಸೀನತೆಯನ್ನು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ತೀವ್ರವಾಗಿ ಖಂಡಿಸಿದ್ದಾರೆ.
Vijaya Karnataka Web ananth


ಈ ಕುರಿತು ಸಚಿವರು ಕೇಂದ್ರ ಗೃಹ ಮಂತ್ರಿ ರಾಜನಾಥ ಸಿಂಗ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ರವರಿಗೆ ಪತ್ರ ಬರೆದು, ಮೀನುಗಾರಿಕೆಗೆ ತೆರಳಿದ ಮೀನುಗಾರರನ್ನು ಪತ್ತೆಹಚ್ಚುವಂತೆ ವಿನಂತಿಸಿದ್ದರು. ಪತ್ರಕ್ಕೆ ಸ್ಪಂದಿಸಿ ಈಗಾಗಲೇ ಭಾರತೀಯ ನೌಕಾಸೇನೆ, ಕೋಸ್ಟ್‌ಗಾರ್ಡ್‌ನವರಿಗೆ ಮೀನುಗಾರರನ್ನು ಹಾಗೂ ಬೋಟ್‍ನ್ನು ಪತ್ತೆ ಮಾಡುವಂತೆ ನಿರ್ದೇಶಿಸಿದ್ದಾರೆ. ಈಗಾಗಲೇ ಕಾರ್ಯಪ್ರವೃತ್ತರಾದ ಇವರು ಹಗಲಿರುಳು ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಆತಂಕ ವ್ಯಕ್ತಪಡಿಸಿದ ಸಚಿವರು: ಬೋಟ್ ಸಮೇತ ಮೀನುಗಾರರ ನಾಪತ್ತೆ ಪ್ರಕರಣಕ್ಕೆ ಆತಂಕ ವ್ಯಕ್ತಪಡಿಸಿದ ಸಚಿವ ಅನಂತಕುಮಾರ ಹೆಗಡೆ, 26/11 ಮುಂಬಯಿ ದಾಳಿಗಿಂತ ಮೊದಲು ಮೀನುಗಾರರ ಬೋಟ್‍ನ್ನು ಹೈಜಾಕ್ ಮಾಡಿ ಅದೇ ಬೋಟ್ ಮುಖಾಂತರ ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಭಾರತದ ಗಡಿ ದಾಟಿ ಮುಂಬಯಿಯಲ್ಲಿ ವಿದ್ವಂಸಕ ಕೃತ್ಯ ನಡೆಸಿದ್ದನ್ನು ನೆನಪಿಸಿಕೊಂಡರು. ಈಗಾಗಲೇ ಗೋವಾ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯ ಸರಕಾರಗಳ ಜೊತೆ ಮಾತನಾಡಿದ್ದು, ಅಲ್ಲಿಯ ಸರಕಾರವು ಸಹ ಹುಡುಕುವ ಪ್ರಯತ್ನದಲ್ಲಿ ತೊಡಗಿದೆ ಎಂದು ಸಚಿವರುತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ