ಆ್ಯಪ್ನಗರ

ಹಂತ ಹಂತವಾಗಿ ಸಾಲ ಮನ್ನಾ ಮೊತ್ತ ಬಿಡುಗಡೆ

ಶಿರಸಿ (ಉತ್ತರ ಕನ್ನಡ): ರಾಜ್ಯ ಸರಕಾರ ಪ್ರಕಟಿಸಿರುವ ಸಾಲ ಮನ್ನಾ ಮೊತ್ತವನ್ನು ಹಂತ ಹಂತವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು.

Vijaya Karnataka 18 Jun 2019, 5:00 am
ಶಿರಸಿ (ಉತ್ತರ ಕನ್ನಡ): ರಾಜ್ಯ ಸರಕಾರ ಪ್ರಕಟಿಸಿರುವ ಸಾಲ ಮನ್ನಾ ಮೊತ್ತವನ್ನು ಹಂತ ಹಂತವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು.
Vijaya Karnataka Web step by step loan waiver is released
ಹಂತ ಹಂತವಾಗಿ ಸಾಲ ಮನ್ನಾ ಮೊತ್ತ ಬಿಡುಗಡೆ


ಸೋಮವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ''ಸಾಲ ಮನ್ನಾ ಮೊತ್ತ ದೊಡ್ಡದಾಗಿರುವುದರಿಂದ ಒಂದೇ ಸಲಕ್ಕೆ ಬಿಡುಗಡೆ ಮಾಡುವುದು ಕಷ್ಟಕರವಾಗಿದೆ. ಈ ಕುರಿತು ಇರುವ ಗೊಂದಲ ಪರಿಹಾರ ಮಾಡಲಾಗುತ್ತಿದೆ'' ಎಂದು ಹೇಳಿದರು.

''ರಾಜ್ಯದಲ್ಲಿ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 650 ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭತ್ತದ ಗದ್ದೆ ನಾಟಿ, ಕಳೆ ಕೀಳುವುದು ಹಾಗೂ ಕೊಯ್ಲು, ಅಡಿಕೆ ತೋಟಗಳಲ್ಲಿ ಬದು ನಿರ್ಮಾಣ ಕುರಿತೂ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗುವುದು'' ಎಂದು ತಿಳಿಸಿದರು.

''ಜಿಂದಾಲ್‌ ಕಂಪನಿಗೆ ಭೂಮಿ ಕೊಡುವ ಬಗ್ಗೆ ಸರಕಾರ ಕಾನೂನು ಪ್ರಕಾರವಾಗಿಯೇ ನಿರ್ಧಾರ ಕೈಗೊಂಡಿದೆ'' ಎಂದು ಸಚಿವ ಶಿವಶಂಕರ ರೆಡ್ಡಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ