ಆ್ಯಪ್ನಗರ

ಧನಾತ್ಮಕ ಚಿಂತನೆಯಿಂದ ಯಶಸ್ಸು ಸಾಧ್ಯ

ಭಟ್ಕಳ : ಧನಾತ್ಮಕ ಚಿಂತನೆಯಿಂದ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಜಾಲಿ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶಾರದಾ ನಾಯ್ಕ ಹೇಳಿದರು.

Vijaya Karnataka 4 Jul 2019, 5:00 am
ಭಟ್ಕಳ : ಧನಾತ್ಮಕ ಚಿಂತನೆಯಿಂದ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಜಾಲಿ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶಾರದಾ ನಾಯ್ಕ ಹೇಳಿದರು.
Vijaya Karnataka Web KWR-2BKL2


ತಾಲೂಕಿನ ದಿ. ನ್ಯೂ ಇಂಗ್ಲಿಷ್‌ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮತ್ತು ಪ್ರಥಮ ಪಿಯು ವಿದ್ಯಾರ್ಥಿಗಳನ್ನು ಸ್ವಾಗತಿಸುವ 'ಸಮಾಗಮ 2019' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿ, ಶ್ರೀ ಜ್ಞಾನೇಶ್ವರಿ ಶಿಕ್ಷ ಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ನರಸಿಂಹ ಮೂರ್ತಿ ಮಾತನಾಡಿ, ವಿಧೇಯತೆ ಮತ್ತು ಸಜ್ಜನಿಕೆ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿದೆ ಎಂದು ಹೇಳಿದರು. ಅಧ್ಯಕ್ಷ ತೆ ವಹಿಸಿದ್ದ ಭಟ್ಕಳ ಎಜ್ಯುಕೇಶನ ಟ್ರಸ್ಟನ ಅಧ್ಯಕ್ಷ ಡಾ. ಸುರೇಶ ನಾಯಕ ಮಾತನಾಡಿ, ನಾವೆಲ್ಲರೂ ಒಂದು ಎನ್ನುವ ಭಾವನೆಯೊಂದಿಗೆ ಧೈರ್ಯ ಮತ್ತು ಸ್ವಾವಲಂಬನೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡಾಗ ಗುರಿ ಮುಟ್ಟಲು ಸಾಧ್ಯ ಎಂದು ಹೇಳಿದರು. ಪ್ರಾಚಾರ್ಯ ವೀರೇಂದ್ರ ಶಾನಭಾಗ ಮತ್ತು ವಿದ್ಯಾಂಜಲಿ ಪಬ್ಲಿಕ ಶಾಲೆಯ ಪ್ರಾಚಾರ್ಯ ಮಮತಾ ಮಾತನಾಡಿದರು. ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತರ ಕನ್ನಡಕ್ಕೆ ವಾಣಿಜ್ಯ ವಿಭಾಗದಲ್ಲಿ ತೃತೀಯ ರಾರ‍ಯಂಕ ಪಡೆದ ಚೈತ್ರಾ ಮಹಾಲೆ ಮತ್ತು ಕಲಾ ವಿಭಾಗದಲ್ಲಿ ಹತ್ತನೇ ರಾರ‍ಯಂಕ ಪಡೆದ ಈರಣ್ಣ ದೊಶಗೆರ ಮತ್ತು 100% ಫಲಿತಾಂಶ ದಾಖಲಿಸಿದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಾದ ಶಾಯಿಲ್‌ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಅನ್ಫಾಲ್‌ ಸ್ವಾಗತಿಸಿದರು, ನಾಗರತ್ನಾ ವಂದಿಸಿದರು ಮತ್ತು ವಿಶಾಲ್‌ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ