ಆ್ಯಪ್ನಗರ

ಭಟ್ಕಳದಲ್ಲಿ ಶಂಕಿತ ಕೊರೊನಾ ರೋಗಿ ಎಸ್ಕೇಪ್‌, ಯುವಕನ ಮನವೊಲಿಸಿ ವಾಪಸ್‌ ಆಸ್ಪತ್ರೆಗೆ ಶಿಫ್ಟ್

ಭಾರತದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಆರಂಭವಾದಾಗಿನಿಂದಲೂ ಶಂಕಿತ ರೋಗಿಗಳು ಆಸ್ಪತ್ರೆಯಿಂದ ಪರಾರಿಯಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಇಂತಹದ್ದೇ ಪ್ರಕರಣ ನಡೆದಿದ್ದು, ಭಟ್ಕಳದ ಶಂಕಿತ ಕೊರೊನಾ ರೋಗಿಯೊಬ್ಬ ರಾತ್ರೊರಾತ್ರಿ ಪರಾರಿಯಾಗಿ ಆತಂಕ ಸೃಷ್ಟಿಯಾಗಿತ್ತು.

Vijaya Karnataka Web 30 Mar 2020, 2:46 pm
ಕಾರವಾರ: ಶಂಕಿತ ಕೊರೊನಾ ರೋಗಿಗಳು ಆಸ್ಪತ್ರೆಯಿಂದ ಪರಾರಿಯಾಗುತ್ತಿರುವ ಘಟನೆಗಳು ಮೊದಲಿನಿಂದಲೂ ವರದಿಯಾಗುತ್ತಿವೆ. ಇಂತಹ ಘಟನೆಗೆ ಈಗ ಉತ್ತರ ಕನ್ನಡ ಜಿಲ್ಲೆಯೂ ಸಾಕ್ಷಿಯಾಗಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದ ಯುವಕನೊಬ್ಬ ಆಸ್ಪತ್ರೆಯಿಂದ ಪರಾರಿಯಾಗಿ ಆತಂಕ ಸೃಷ್ಟಿಸಿದ ಘಟನೆ ಭಟ್ಕಳದಲ್ಲಿ ನಡೆದಿದೆ.
Vijaya Karnataka Web coronavirus


ಆದರೆ, ಪೊಲೀಸರು ಮತ್ತು ಆರೋಗ್ಯಾಧಿಕಾರಿಗಳು ಸೋಮವಾರ ಯುವಕನ ಮನವೊಲಿಸಿ ವಾಪಸ್ ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದು, ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಶಂಕಿತ ಕೊರೊನಾ ರೋಗಿಯೆಂದು ಮಾ. 27ರಂದು ದಾಖಲಾಗಿದ್ದ ಯುವಕ ಮಾ.29 ರಂದು ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದ.

ಮಾ.29 ರಂದು ಬೆಳಗ್ಗೆಯಿಂದ ಆಸ್ಪತ್ರೆಯ ಸುತ್ತಮುತ್ತ ಯುವತಿ ಒಬ್ಬಳ ಮಾಸ್ಕ್ ಧರಿಸಿಕೊಂಡು ಓಡಾಡಿಕೊಂಡಿದ್ದಳು. ಇದೇ ಯುವತಿ ಯುವಕನಿಗೆ ಊಟ ನೀಡುವ ನೆಪದಲ್ಲಿ ವಾರ್ಡ್ ಪ್ರವೇಶಿಸಿ, ಯುವಕನನ್ನು ಕರೆದುಕೊಂಡು ಹೋಗಿದ್ದಾಳೆ ಎಂದು ಶಂಕಿಸಲಾಗಿತ್ತು. ಜ್ವರ ಹಾಗೂ ಘಂಟಲುನೋವು ಹೊಂದಿರುವ ಈತನನ್ನು ಸಂಶಯದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.‌

ಡೆಡ್ಲಿ ವೈರಸ್‌ ಕೊರೊನಾಗೆ ಔಷಧಿ ರೆಡಿ, ಕ್ಲಿನಿಕಲ್‌ ಟ್ರಯಲ್‌ ಮಾತ್ರ ಬಾಕಿ

ಆದರೆ, ಈತ ಕೊರೋನಾ ಸೋಂಕಿತರ ಅಥವಾ ವಿದೇಶದಿಂದ ಬಂದ ಯಾರ ಸಂಪರ್ಕಕ್ಕೂ ಹೋಗಿರಲಿಲ್ಲ. ಜತೆಗೆ, ಕೊರೋನಾ ಲಕ್ಷಣ ಕಂಡು ಬಂದಿರಲಿಲ್ಲ ಎಂದು ವೈದ್ಯರು ದೃಢಪಡಿಸಿದ್ದರು. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಆದರೆ, ಭಯಗೊಂಡ ಯುವಕ ಪರಾರಿಯಾಗಿ ತನ್ನ ಮನೆ ಸೇರಿಕೊಂಡಿದ್ದ. ಮಾಹಿತಿ ತಿಳಿದ ಭಟ್ಕಳ ಪೊಲೀಸರು ಈತನ ಮನೆಗೆ ತೆರಳಿ ಕೌನ್ಸಲಿಂಗ್‌ ಮಾಡಿದ್ದು, ನಂತರ ಭಟ್ಕಳ ಆಸ್ಪತ್ರೆಗೆ ಮರಳಿ ಕರೆತರಲಾಗಿದೆ.‌

ಕರ್ನಾಟಕ-ಕೇರಳ ಗಡಿ ಬಂದ್‌ ತೆರವಿಗೆ ಆಗ್ರಹ, ಕಾಸರಗೋಡು ಸಂಸದನಿಂದ ಸುಪ್ರೀಂಗೆ ಮೊರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ