ಅಂಕೋಲಾ: ತಾಲೂಕಿನ ಅವರ್ಸಾದಲ್ಲಿ ಶ್ರೀ ಸರಸ್ವತಿ ಸೇವಾ ಸಮಿತಿ ವತಿಯಿಂದ ಉಚಿತವಾಗಿ ತಬಲಾ ತರಬೇತಿ ಶಾಲೆಯು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.
ಸೇವಾ ಸಮಿತಿಯ ಅಧ್ಯಕ್ಷ ಮಂಗಲದಾಸ ಕಾಮತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅವರ್ಸಾದಂತಹ ಗ್ರಾಮೀಣ ಪ್ರದೇಶದಲ್ಲಿ ಹಲವಾರು ಪ್ರತಿಭೆಗಳು ಎಲೆಮರೆಯ ಕಾಯಿಯಂತೆ ಉಳಿದುಕೊಂಡಿವೆ. ಅಂತಹ ಪ್ರತಿಭೆಗಳನ್ನು ಹೊರ ಜಗತ್ತಿಗೆ ಪರಿಚಯಿಸುವ ಉದ್ದೇಶದಿಂದ ತಬಲಾ ವಾದನ ತರಬೇತಿ ಶಾಲೆ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಮಿತಿಯ ಕಾರ್ಯದರ್ಶಿ ರಾಘವೇಂದ್ರ ಭಟ್ ಮಾತನಾಡಿ ಸಮಾಜ ಸೇವೆಯನ್ನೇ ಗುರಿಯಾಗಿಸಿಕೊಂಡು ಆರಂಭಗೊಂಡ ಸರಸ್ವತಿ ಸೇವಾ ಸಮಿತಿಯು ಹಂತ ಹಂತವಾಗಿ ತನ್ನ ಸೇವೆಯ ಮೂಲಕ ಎಲ್ಲರ ಗಮನ ಸೆಳೆಯುತ್ತದೆ. ಅಲ್ಲದೇ ದಾನಿಗಳೂ ತಮ್ಮ ಸಹಾಯ ಹಸ್ತವನ್ನು ಚಾಚುತ್ತಾ ಸಮಿತಿಯೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದರು.
ಸಮಿತಿಯ ಸದಸ್ಯರಾದ ಲತಾ ಕಾಮತ್, ಮಂಜುಳಾ ನಾಯ್ಕ, ಗುರುದಾಸ ಬಾನಾವಳಿಕರ, ಮೋಹನದಾಸ ಪೈ, ಲಕ್ಷ್ಮೀದಾಸ ಪೈ, ಕಿರಣ ಪ್ರಭು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.