ಯಲ್ಲಾಪುರ : ತಾಲೂಕಾ ಕಾನೂನು ಸೇವಾ ಸಮಿತಿ, ಯಲ್ಲಾಪುರ ವಕೀಲರ ಸಂಘ ಮತ್ತು ಕಾಲೇಜಿನ ಐ.ಕ್ಯು.ಎ.ಸಿ. ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಬೃಹತ್ ಲೋಕ ಅದಾಲತ್, ಜನತಾ ನ್ಯಾಯಾಲಯ, ಮಧ್ಯಸ್ಥಿಕೆಯ ಮಹತ್ವ ಹಾಗೂ ಸಾಮಾನ್ಯ ಕಾನೂನುಗಳ ಬಗ್ಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿ.ವಿ.ಜೋಶಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಂದು ವಿಷಯವೂ ಕಾನೂನಿನ ಅಡಿಯಲ್ಲಿಯೇ ನಡೆಯುತ್ತಿದೆ. ವಿದ್ಯಾರ್ಥಿಗಳು ತಮ್ಮ ಓದಿನ ಜತೆಗೆ ಕಾನೂನಿನ ವಿಷಯಗಳನ್ನು ತಿಳಿದುಕೊಳ್ಳಬೇಕು. ಲೋಕ ಅದಾಲತ್ ಹಾಗೂ ಜನತಾ ನ್ಯಾಯಾಲಯದಿಂದ ದೊರೆಯುವ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಅತಿಥಿಗಳಾಗಿ ಆಗಮಿಸಿದ್ದ ಸಿವಿಲ್ ನ್ಯಾಯಾಧೀಶ ಓಂಕಾರಮೂರ್ತಿ ಎಚ್. ಮಾತನಾಡಿ, ಎಲ್ಲರೂ ಕಾನೂನು ಜ್ಞಾನವನ್ನು ತಿಳಿದುಕೊಳ್ಳುವ ಜತೆಗೆ ಇತರರಿಗೂ ತಿಳಿಸಬೇಕು ಎಂದು ಹೇಳಿದರು.
ಇನ್ನೊಬ್ಬ ಮುಖ್ಯ ಅತಿಥಿ ವಕೀಲರ ಸಂಘದ ಅಧ್ಯಕ್ಷ ಟಿ.ಜಿ.ಕೋಮಾರ ಮಾತನಾಡಿ, ಎಲ್ಲರೂ ಸಮಾನ ಸ್ಥರದಲ್ಲಿ ಸಮಾಜದಲ್ಲಿ ಬದುಕಬೇಕಾದರೆ ಕಾನೂನು ಜ್ಞಾನ ಅಗತ್ಯ. ಇದು ವ್ಯಕ್ತಿಯನ್ನು ಮೂಲದಿಂದ ಎತ್ತರದವರೆಗೆ ಹಿಡಿದಿಟ್ಟುಕೊಳ್ಳುತ್ತದೆ. ವಿದ್ಯಾರ್ಥಿಗಳು ಕಾಲೇಜಿನ ವಿಷಯಗಳ ಜತೆಗೆ ಇತರೆ ಸಮಾಜಮುಖಿ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ನ್ಯಾಯವಾದಿ ಎನ್.ಟಿ.ಗಾಂವ್ಕರ್ ಮಾತನಾಡಿ, ಯಾವುದೇ ಪ್ರಕರಣಗಳನ್ನು ಬಗೆಹರಿಸಲು ನ್ಯಾಯಾಲಯದ ಭಾಗವಾಗಿ ಇರುವ ವೇದಿಕೆಯೇ ಜನತಾ ನ್ಯಾಯಾಲಯ ಹಾಗೂ ಮಧ್ಯಸ್ಥಿಕೆ. ವೈಚಾರಿಕತೆಯ ಬೇಧವನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಂಡರೆ ಸಾಮಾಜಿಕ ವೈಷಮ್ಯ ದೂರವಾಗುತ್ತದೆ. ಇದೇ ರೀತಿ ಜನತಾ ನ್ಯಾಯಾಲಯ ಪರಸ್ಪರ ಚರ್ಚೆಯ ಮೂಲಕ ಸಮಸ್ಯೆ ಬಗೆಹರಿಸಿ ಲೋಕ ಅದಾಲತ್ನಲ್ಲಿ ಪರಿಹಾರ ಕಂಡುಕೊಳ್ಳಬಹುದು. ವಿದ್ಯಾರ್ಥಿಗಳು ಈ ಕಾನೂನುಗಳ ಅರಿವನ್ನು ತಿಳಿದುಕೊಳ್ಳುವುದರ ಜೊತೆಗೆ ಜನಸಾಮಾನ್ಯರಿಗೂ ತಿಳಿಸಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷ ತೆ ವಹಿಸಿದ್ದ ಪ್ರಾಂಶುಪಾಲೆ ಡಾ.ದಾಕ್ಷಾಯಣಿ ಜಿ. ಹೆಗಡೆ ಮಾತನಾಡಿ, ಸಮಾಜದಲ್ಲಿ ಉತ್ತಮ ಜೀವನ ಸಾಗಿಸಲು ಕಾನೂನಿನ ಕನಿಷ್ಠ ಜ್ಞಾನ ಅಗತ್ಯ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅಳವಡಿಸಿಕೊಳ್ಳಲು ಪಠ್ಯದ ಜತೆಗೆ ಇತರೆ ಕಾನೂನು ವಿಷಯವನ್ನು ತಿಳಿದುಕೊಂಡು ಕಾನೂನಿನ ಅರಿವಿಲ್ಲದವರಿಗೆ ಜಾಗೃತಿ ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಸಿಂಧೂ ವೈದ್ಯ ಪ್ರಾರ್ಥಿಸಿದರು. ಕಾಲೇಜಿನ ಐ.ಕ್ಯು.ಎ.ಸಿ. ಸಂಚಾಲಕ ಡಿ.ಎಸ್.ಭಟ್ ಸ್ವಾಗತಿಸಿದರು, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಎಂ.ಯು.ಕುಡಚಿ ವಂದಿಸಿದರು, ಅಕ್ಷ ತಾ ನಾಯ್ಕ ನಿರೂಪಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿ.ವಿ.ಜೋಶಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಂದು ವಿಷಯವೂ ಕಾನೂನಿನ ಅಡಿಯಲ್ಲಿಯೇ ನಡೆಯುತ್ತಿದೆ. ವಿದ್ಯಾರ್ಥಿಗಳು ತಮ್ಮ ಓದಿನ ಜತೆಗೆ ಕಾನೂನಿನ ವಿಷಯಗಳನ್ನು ತಿಳಿದುಕೊಳ್ಳಬೇಕು. ಲೋಕ ಅದಾಲತ್ ಹಾಗೂ ಜನತಾ ನ್ಯಾಯಾಲಯದಿಂದ ದೊರೆಯುವ ಪ್ರಯೋಜನಗಳನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಅತಿಥಿಗಳಾಗಿ ಆಗಮಿಸಿದ್ದ ಸಿವಿಲ್ ನ್ಯಾಯಾಧೀಶ ಓಂಕಾರಮೂರ್ತಿ ಎಚ್. ಮಾತನಾಡಿ, ಎಲ್ಲರೂ ಕಾನೂನು ಜ್ಞಾನವನ್ನು ತಿಳಿದುಕೊಳ್ಳುವ ಜತೆಗೆ ಇತರರಿಗೂ ತಿಳಿಸಬೇಕು ಎಂದು ಹೇಳಿದರು.
ಇನ್ನೊಬ್ಬ ಮುಖ್ಯ ಅತಿಥಿ ವಕೀಲರ ಸಂಘದ ಅಧ್ಯಕ್ಷ ಟಿ.ಜಿ.ಕೋಮಾರ ಮಾತನಾಡಿ, ಎಲ್ಲರೂ ಸಮಾನ ಸ್ಥರದಲ್ಲಿ ಸಮಾಜದಲ್ಲಿ ಬದುಕಬೇಕಾದರೆ ಕಾನೂನು ಜ್ಞಾನ ಅಗತ್ಯ. ಇದು ವ್ಯಕ್ತಿಯನ್ನು ಮೂಲದಿಂದ ಎತ್ತರದವರೆಗೆ ಹಿಡಿದಿಟ್ಟುಕೊಳ್ಳುತ್ತದೆ. ವಿದ್ಯಾರ್ಥಿಗಳು ಕಾಲೇಜಿನ ವಿಷಯಗಳ ಜತೆಗೆ ಇತರೆ ಸಮಾಜಮುಖಿ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ನ್ಯಾಯವಾದಿ ಎನ್.ಟಿ.ಗಾಂವ್ಕರ್ ಮಾತನಾಡಿ, ಯಾವುದೇ ಪ್ರಕರಣಗಳನ್ನು ಬಗೆಹರಿಸಲು ನ್ಯಾಯಾಲಯದ ಭಾಗವಾಗಿ ಇರುವ ವೇದಿಕೆಯೇ ಜನತಾ ನ್ಯಾಯಾಲಯ ಹಾಗೂ ಮಧ್ಯಸ್ಥಿಕೆ. ವೈಚಾರಿಕತೆಯ ಬೇಧವನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಂಡರೆ ಸಾಮಾಜಿಕ ವೈಷಮ್ಯ ದೂರವಾಗುತ್ತದೆ. ಇದೇ ರೀತಿ ಜನತಾ ನ್ಯಾಯಾಲಯ ಪರಸ್ಪರ ಚರ್ಚೆಯ ಮೂಲಕ ಸಮಸ್ಯೆ ಬಗೆಹರಿಸಿ ಲೋಕ ಅದಾಲತ್ನಲ್ಲಿ ಪರಿಹಾರ ಕಂಡುಕೊಳ್ಳಬಹುದು. ವಿದ್ಯಾರ್ಥಿಗಳು ಈ ಕಾನೂನುಗಳ ಅರಿವನ್ನು ತಿಳಿದುಕೊಳ್ಳುವುದರ ಜೊತೆಗೆ ಜನಸಾಮಾನ್ಯರಿಗೂ ತಿಳಿಸಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷ ತೆ ವಹಿಸಿದ್ದ ಪ್ರಾಂಶುಪಾಲೆ ಡಾ.ದಾಕ್ಷಾಯಣಿ ಜಿ. ಹೆಗಡೆ ಮಾತನಾಡಿ, ಸಮಾಜದಲ್ಲಿ ಉತ್ತಮ ಜೀವನ ಸಾಗಿಸಲು ಕಾನೂನಿನ ಕನಿಷ್ಠ ಜ್ಞಾನ ಅಗತ್ಯ ಶಿಸ್ತುಬದ್ಧವಾದ ಜೀವನ ಕ್ರಮವನ್ನು ಅಳವಡಿಸಿಕೊಳ್ಳಲು ಪಠ್ಯದ ಜತೆಗೆ ಇತರೆ ಕಾನೂನು ವಿಷಯವನ್ನು ತಿಳಿದುಕೊಂಡು ಕಾನೂನಿನ ಅರಿವಿಲ್ಲದವರಿಗೆ ಜಾಗೃತಿ ಮೂಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಸಿಂಧೂ ವೈದ್ಯ ಪ್ರಾರ್ಥಿಸಿದರು. ಕಾಲೇಜಿನ ಐ.ಕ್ಯು.ಎ.ಸಿ. ಸಂಚಾಲಕ ಡಿ.ಎಸ್.ಭಟ್ ಸ್ವಾಗತಿಸಿದರು, ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಎಂ.ಯು.ಕುಡಚಿ ವಂದಿಸಿದರು, ಅಕ್ಷ ತಾ ನಾಯ್ಕ ನಿರೂಪಿಸಿದರು.