ಹೊನ್ನಾವರ:ರಾಜ್ಯ ಜೆಡಿಎಸ್ ಮಹಿಳಾ ರೈತ ಮೋರ್ಚಾದ ವತಿಯಿಂದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಜನಪರ ಕಾರ್ಯಗಳ ಹಾಗೂ ಪ್ರಸಕ್ತ ಚುನಾವಣೆಯ ಪ್ರಣಾಳಿಕೆಗಳ ಭಿತ್ತಿ ಪತ್ರವನ್ನು ಕಾರ್ಯಕರ್ತರ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೋರ್ಚಾದ ಅಧ್ಯಕ್ಷೆ ಚೈತ್ರಾ ಗೌಡ ತಿಳಿಸಿದರು.
ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬರುವ ಚುನಾವಣೆಯಲ್ಲಿ ಮತದಾರರು ಜೆಡಿಎಸ್ ಬೆಂಬಲಿಸಬೇಕು ಎಂದು ಕೋರಿದರು.
ಮಂಕಿ ಬ್ಲಾಕ್ ಜೆಡಿಎಸ್ ಘಟಕದ ಅಧ್ಯಕ್ಷ ರಾಜು ನಾಯ್ಕ, ಈ ಹಿಂದೆ 20 ತಿಂಗಳ ಆಡಳಿತ ನಡೆಸಿದ್ದ ಕುಮಾರಸ್ವಾಮಿ ಹಾಗೂ ಪ್ರಧಾನಿಯಾಗಿದ್ದಾಗ ಎಚ್. ಡಿ.ದೇವೆಗೌಡರು ಉತ್ತಮ ಆಡಳಿತ ನೀಡಿ ಜನಸಾಮನ್ಯರಿಗೆ ಉತ್ತಮ ಕೊಡುಗೆ ನೀಡಿದ್ದರು. ರಾಷ್ಟೀಯ ಪಕ್ಷ ಗಳಾದ ಬಿಜೆಪಿ,ಕಾಂಗ್ರೆಸ್ನಿಂದ ಅಂತಹ ಆಡಳಿತ ನೀಡಲು ಇದುವರೆಗೂ ಸಾಧ್ಯವಾಗಿಲ್ಲ ಎಂದರು.
ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ವಾಸುದೇವ ಭಂಡಾರಕರ್, ದೇಶದ ಬೆನ್ನೆಲುಬಾದ ರೈತ ಸಮುದಾಯದ ಮಹಿಳೆಯರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ರೈತ ಮಹಿಳೆಯರನ್ನು ಸಂಘಟಿಸಿ ಸರಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ರೂಪಿಸಲಾಗಿದೆ ಎಂದರು.
ತಾಲೂಕು ಅಧ್ಯಕ್ಷ ಸುಬ್ರಾಯ ಗೌಡ, ನಗರ ಘಟಕದ ಅಧ್ಯಕ್ಷ ಶ್ರೀಪಾದ ನಾಯ್ಕ, ಗಣಪತಿ ಗೌಡ, ಮಂಜುನಾಥ ನಾಯ್ಕ, ಶಂಕರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.