ಆ್ಯಪ್ನಗರ

ಆರೋಪಿ ಬಂಧನಕ್ಕೆ ಆಗ್ರಹ

ಕಾರವಾರ : ಯಲ್ಲಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯಕರ್ನಾಟಕ ಯಲ್ಲಾಪುರ ತಾಲೂಕು ಘಟಕದಿಂದ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.

Vijaya Karnataka 15 May 2019, 5:00 am
ಕಾರವಾರ : ಯಲ್ಲಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಭಾವಿ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಯಕರ್ನಾಟಕ ಯಲ್ಲಾಪುರ ತಾಲೂಕು ಘಟಕದಿಂದ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.
Vijaya Karnataka Web the accused demanded arrest
ಆರೋಪಿ ಬಂಧನಕ್ಕೆ ಆಗ್ರಹ


ಯಲ್ಲಾಪುರದ ಅಂಗನವಾಡಿಯೊಂದರಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುವ ಮದ್ನೂರಿನ ಮಹಿಳೆಯೊಬ್ಬರನ್ನು ಪ್ರಭಾವಿ ನಾಗು ಎಂಬುವವರು ಕಾರಿನಲ್ಲಿ ಅಪಹರಣ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಳಿಕ ಸಂತ್ರಸ್ತ ಮಹಿಳೆಯು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಏ.30ರಂದು ಆರೋಪಿಯ ವಿರುದ್ಧ ದೂರು ನೀಡಿದ್ದಾರೆ. ಆದರೆ ಪೊಲೀಸರು ಈವರೆಗೂ ಆರೋಪಿಯನ್ನು ಬಂಧಿಸಿಲ್ಲ. ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಘಟನೆಯು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ವಿಲ್ಸನ್‌ ಫರ್ನಾಂಡಿಸ್‌, ಮಹೇಶ ಪೂಜಾರ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ