ಆ್ಯಪ್ನಗರ

ಸಾಲ ಮನ್ನಾ ನಿಲುವು ಸ್ಪಷ್ಟಪಡಿಸಿ

ಕಾರವಾರ :ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.

Vijaya Karnataka 22 Jul 2018, 5:00 am
ಕಾರವಾರ :ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ.
Vijaya Karnataka Web the debt waiver stance is clear
ಸಾಲ ಮನ್ನಾ ನಿಲುವು ಸ್ಪಷ್ಟಪಡಿಸಿ


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿ 16 ದಿನಗಳೇ ಕಳೆದವು. ಆದರೆ, ಇನ್ನೂ ಅಧಿಕೃತ ಸುತ್ತೋಲೆ ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾಲ ಮನ್ನಾ ಕುರಿತು ಮುಖ್ಯಮಂತ್ರಿಗಳ ಸ್ಪಷ್ಟ ನಿಲುವು ಗೊತ್ತಾಗುತ್ತಿಲ್ಲ. ಸಾಲಮನ್ನಾ ಯಾವಾಗ ಮಾಡ್ತೀರಿ ? ಎಂದು ಮುಖ್ಯಮಂತ್ರಿಗಳನ್ನು ಅವರು ಪ್ರಶ್ನಿಸಿದರು.

ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ :

ಕಾಂಗ್ರೆಸ್‌, ಜೆಡಿಎಸ್‌ನವರು ಅಲ್ಪ ಸಂಖ್ಯಾತರ ಹಿತರಕ್ಷರು ಎಂದು ಹೇಳಿಕೊಳ್ಳುತ್ತಾರೆ. ಆದರೆ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಅನ್ವರ್‌ರ ಮಾಣಿಪ್ಪಾಡಿ ಅವರ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಲು ಹಿಂದೇಟು ಹಾಕುತ್ತಾರೆ ಎಂದು ಶ್ರೀನಿವಾಸ ಪೂಜಾರಿ ಆರೋಪಿಸಿದರು. 2.30 ಲಕ್ಷ ಕೋಟಿ ರೂ. ಮೌಲ್ಯದ 27,000 ಎಕರೆ ವಕ್ಫ್ ಜಮೀನನ್ನು ರಾಜಕಾರಣಿಗಳು ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಅನ್ವರ್‌ ವರದಿ ನೀಡಿದ್ದಾರೆ. ಈ ವರದಿ ಮಂಡನೆಯಿಂದ ಕಾಂಗ್ರೆಸ್‌ ಮುಖಂಡರಿಗೆ ತೊಂದರೆಯಿದೆ ಆದರೆ, ಮುಖ್ಯಮಂತ್ರಿ ಪ್ರಾಮಾಣಿಕರಾಗಿದ್ದರೆ ಅನ್ವರ್‌ ಮಾಣಿಪ್ಪಾಡಿ ಅವರು ನೀಡಿದ ವರದಿಯನ್ನು ಅಧಿವೇಶನದಲ್ಲಿ ಮಂಡಿಸಬೇಕು ಎಂದರು.

'ಉಚಿತ ಬಸ್‌ಪಾಸ್‌ ಬಗ್ಗೆ ಕೇಳಿದರೆ, ಬಸ್‌ ಪ್ರಯಾಣ ದರವನ್ನು ಶೇ. 20ರಷ್ಟು ಏರಿಕೆ ಮಾಡುವುದಾಗಿ ಹೇಳುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜನರಿಗೆ ಆಗುವ ಅನ್ಯಾಯ ನೋಡಿಕೊಂಡು ಬಿಜೆಪಿ ಸುಮ್ಮನಿರುವುದಿಲ್ಲ' ಎಂದರು. ಶಾಸಕಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ, ಮಾಜಿ ಶಾಸಕ ಸುನೀಲ ಹೆಗಡೆ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ