ಆ್ಯಪ್ನಗರ

ಯುವ ಶಕ್ತಿಯಿಂದ ದೇಶದ ಅಭಿವೃದ್ಧಿ ಸಾಧ್ಯ

ಭಟ್ಕಳ : ಮುರುಡೇಶ್ವರದ ಆರ್‌.ಎನ್‌.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ನೂತನ ವಿದ್ಯಾರ್ಥಿಗಳಿಗೆ ಸ್ವಾಗತ 'ಸಂಗಮ 2019' ಕಾರ್ಯಕ್ರಮವನ್ನು ಭಟ್ಕಳ ಶಾಸಕ ಸುನೀಲ್‌ ನಾಯ್ಕ ಉದ್ಘಾಟಿಸಿದರು.

Vijaya Karnataka 4 Jul 2019, 5:00 am
ಭಟ್ಕಳ : ಮುರುಡೇಶ್ವರದ ಆರ್‌.ಎನ್‌.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ನೂತನ ವಿದ್ಯಾರ್ಥಿಗಳಿಗೆ ಸ್ವಾಗತ 'ಸಂಗಮ 2019' ಕಾರ್ಯಕ್ರಮವನ್ನು ಭಟ್ಕಳ ಶಾಸಕ ಸುನೀಲ್‌ ನಾಯ್ಕ ಉದ್ಘಾಟಿಸಿದರು.
Vijaya Karnataka Web KWR-2BKL3


ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ದೇಶದ ಆಸ್ತಿಯಾಗಿದ್ದಾರೆ. ಯುವ ಶಕ್ತಿಯಿಂದ ದೇಶದ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳಿಗೆ ಪಿಯುಸಿ ಒಂದು ಮಹತ್ವದ ಘಟ್ಟವಾಗಿದ್ದು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಒಂದು ಉತ್ತಮ ಅವಕಾಶವಾಗಿದೆ. ಈ ಅವಧಿಯಲ್ಲಿ ಸ್ವಲ್ಪ ಮಟ್ಟಿನ ಶ್ರಮ ಹಾಕಿದರೆ ಜೀವನ ಪೂರ್ತಿ ಸುಖವಾಗಿರಬಹುದು ಎಂದು ಹೇಳಿದರು. ಕಳೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಪ್ರಾಚಾರ್ಯ ಮಾಧವ.ಪಿ. ಅಧ್ಯಕ್ಷ ತೆ ವಹಿಸಿದ್ದರು. ಆರ್‌.ಎನ್‌.ಎಸ್‌.ವಿದ್ಯಾನಿಕೇತನದ ಪ್ರಾಚಾರ್ಯ ಡಾ. ಸುರೇಶ ಶೆಟ್ಟಿ, ಆರ್‌.ಎನ್‌.ಎಸ್‌. ವಿದ್ಯಾಸಂಸ್ಥೆಗಳ ಆಂತರಿಕ ಲೆಕ್ಕ ಪರಿಶೋಧಕ ಮಂಜುನಾಥ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಕಾಮಾಕ್ಷಿ ಪೈ ಉಪಸ್ಥಿತರಿದ್ದರು. ಮಮತಾ ಸಂಗಡಿಗರು ಪ್ರಾರ್ಥಿಸಿದರು. ಸ್ವಾತಿ ನಾಯ್ಕ ಸ್ವಾಗತಿಸಿದರು. ಅಶ್ವಿನಿ ನಾಯ್ಕ ವಂದಿಸಿದರು. ಚಂದನಾ ನಾಯ್ಕ ಹಾಗೂ ಅಲ್‌ಅಷ್ಖಾನ್‌ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ