ಆ್ಯಪ್ನಗರ

ಎಚ್‌ಐವಿ ಪ್ರಕರಣ ಹೆಚ್ಚಳ ಆತಂಕಕಾರಿ

ಕಾರವಾರ: ಜಿಲ್ಲೆಯಲ್ಲಿವರ್ಷದಿಂದ ವರ್ಷಕ್ಕೆ ಎಚ್‌ಐವಿ ಸೋಂಕಿನ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಹೇಳಿದರು.

Vijaya Karnataka 24 Oct 2019, 5:00 am
ಕಾರವಾರ: ಜಿಲ್ಲೆಯಲ್ಲಿವರ್ಷದಿಂದ ವರ್ಷಕ್ಕೆ ಎಚ್‌ಐವಿ ಸೋಂಕಿನ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಹೇಳಿದರು.
Vijaya Karnataka Web the increase in hiv cases is alarming
ಎಚ್‌ಐವಿ ಪ್ರಕರಣ ಹೆಚ್ಚಳ ಆತಂಕಕಾರಿ


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಬುಧವಾರ ನಡೆದ ಜಿಲ್ಲಾ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತರೆ ಜಿಲ್ಲೆಗಳಿಗೆ ಹೋಲಿಸಿದಾಗ ಉತ್ತರ ಕನ್ನಡದಲ್ಲಿಎಚ್‌ಐವಿ ಬಾಧಿತರ ಸಂಖ್ಯೆ ಕಡಿಮೆ ಇದೆ. ಆದರೆ ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್‌ ವರೆಗೆ 37 ಪುರುಷ, 46 ಮಹಿಳೆ ಹಾಗೂ 7 ಗರ್ಭಿಣಿಯರು ಸೇರಿದಂತೆ ಒಟ್ಟು 83 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇದರಿಂದ ಅಮಾಯಕರು ಸಹ ಬಲಿಯಾಗುತ್ತಿರುವುದು ಕಂಡು ಬರುತ್ತಿದೆ. ಸೂಕ್ತ ಸಮಾಲೋಚನೆ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಎಚ್‌ಐವಿ ಪ್ರಕರಣವನ್ನು ನಿಯಂತ್ರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಷ್ಠರೋಗ ಪ್ರಕರಣದಿಂದ ಉಂಟಾಗುವ ನ್ಯೂನತೆಯನ್ನು ಕಡಿಮೆ ಮಾಡಲು ಹಾಗೂ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ 14 ದಿನಗಳ ಅಭಿಯಾನವನ್ನು ನವೆಂಬರ್‌ನಲ್ಲಿ ಹಮ್ಮಿಕೊಳ್ಳುತ್ತಿದೆ. ಎಲ್ಲಇಲಾಖೆಗಳ ಸಮನ್ವಯದೊಂದಿಗೆ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ಹೇಳಿದರು.

ಅಧಿಕಾರಿಗಳ ಗೈರು ಹಾಜರಿ: ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಭೆಗೆ ಹಾಜರಾಗದೇ ತೀರಾ ಕೆಳ ಹಂತದ ಸಿಬ್ಬಂದಿಯನ್ನು ಸಭೆಗೆ ಕಳುಹಿಸುವುದರಿಂದ ಸಮಗ್ರ ಮಾಹಿತಿ ಸಂಗ್ರಹಣೆ ಕೊರತೆ ಉಂಟಾಗುತ್ತದೆ ಎಂದು ಡಿಸಿ ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಯಶಸ್ವಿಯಾಗುವುದು ಕಡಿಮೆಯಾಗುತ್ತವೆ. ಮುಂದಿನ ಸಭೆಯಲ್ಲಿಈ ರೀತಿಯ ದೋಷ ಉಂಟಾಗದಂತೆ ನೋಡಿಕೊಂಡು ಆರೋಗ್ಯ ಇಲಾಖೆಯು ವಿವಿಧ ಇಲಾಖೆಗಳÜ ಸಮನ್ವಯದೊಂದಿಗೆ ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

ಧೂಮಪಾನ ತಡೆ ಜಾಗೃತಿ: ಸಾರ್ವಜನಿಕ ಧೂಮಪಾನ ಸೇವನೆ ಕುರಿತು ಜನಜಾಗೃತಿ ಮೂಡಿ ಹತೋಟಿಗೆ ಬಂದಿರುತ್ತದೆ. ಇದೇ ರೀತಿ ತಂಬಾಕು ಸೇವನೆ ವಿಶೇಷವಾಗಿ ಗುಟ್ಕಾದಂತಹ ಮಾರಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಿ, ಸಾರ್ವಜನಿಕ ಸ್ಥಳಗಳಲ್ಲಿತಂಬಾಕು ಸೇವನೆ ನಿಷೇಧಿಸುವ ಕಾರ್ಯವನ್ನು ಜಿಲ್ಲಾತಂಬಾಕು ನಿಯಂತ್ರಣ ಕೋಶ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಅತ್ಯಂತ ಕ್ರಿಯಾಶೀಲವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿಜಿಲ್ಲಾಆರೋಗ್ಯಾಧಿಕಾರಿ ಡಾ.ಜಿ.ಎನ್‌.ಅಶೋಕ ಕುಮಾರ, ಡಿಸ್ಟ್ರಿಕ್ಟ್ ಸರ್ಜನ್‌ ಶಿವಾನಂದ ಕುಡ್ತಲಕರ್‌, ಜಿಲ್ಲಾಆಯುಷ್‌ ಅಧಿಕಾರಿ ಡಾ.ಲಲಿತಾ ಯು.ಎಚ್‌., ಡಾ.ಶಂಕರರಾವ್‌, ಡಾ.ಮಹಾಬಲೇಶ್ವರ ಹೆಗಡೆ. ಡಾ.ಕ್ಯಾಪ್ಟ್‌ನ್‌ ರಮೇಶ ರಾವ್‌, ತಾಲೂಕು ವೈದ್ಯಾಧಿಕಾರಿ ಸೂರಜ ನಾಯಕ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ