ಭಟ್ಕಳ: ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದ್ದ ಸಾಮಾಜಿಕ ಜಾಲತಾಣಗಳು ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿವೆ ಶಾಸಕ ಸುನಿಲ್ ನಾಯ್ಕ ವಿಷಾದಿಸಿದರು.
ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುರುಡೇಶ್ವರದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾಧ್ಯಮ ಕ್ಷೇತ್ರ ಒಂದು ಸಾಮಾಜಿಕ ಶಕ್ತಿಯಾಗಿದ್ದು, ಸಮಾಜವನ್ನು ಒಟ್ಟುಗೂಡಿಸುತ್ತದೆ. ಪತ್ರಕರ್ತ ಮಾತ್ರ ಗುಣಮಟ್ಟದ ಸುದ್ದಿಯನ್ನು ನೀಡಬಲ್ಲ. ಆದರೆ ಸಾಮಾಜಿಕ ಜಾಲತಾಣಕ್ಕೆ ಇದು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು.
ಸುಬ್ರಾಯ ಭಟ್ ಬಕ್ಕಳ ಹಾಗೂ ನರಸಿಂಹ ಸಾತೊಡ್ಡಿಯವರಿಗೆ ಕ್ರಮವಾಗಿ ಕೆ.ಶಾಮರಾವ್ ಹಾಗೂ ಅಜ್ಜೀಬಳ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಹಿರಿಯ ಪತ್ರಕರ್ತ ಜಿ.ಯು.ಭಟ್, ಆರ್ಎನ್ಎಸ್ ಶಿಕ್ಷ ಣ ಸಂಸ್ಥೆಯ ನಿರ್ದೇಶಕ ಎಂ.ವಿ.ಹೆಗಡೆ, ಹ್ಯೂಮನ್ ವೆಲ್ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ ಡಾ.ಅಮೀನುದ್ದಿನ್ ಗೌಡಾ ಮಾತನಾಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ ಅಧ್ಯಕ್ಷ ತೆ ವಹಿಸಿದ್ದರು. ಭಟ್ಕಳ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ ಉಪಸ್ಥಿತರಿದ್ದರು. ನರಸಿಂಹ ಅಡಿ ಸ್ವಾಗತಿಸಿದರು. ಕೃಷ್ಣಮೂರ್ತಿ ಹೆಬ್ಬಾರ ನಿರೂಪಿಸಿದರು. ಕಾರ್ಯದರ್ಶಿ ಮೋಹನ ನಾಯ್ಕ ವಂದಿಸಿದರು. ಈ ಸಂದರ್ಭದಲ್ಲಿ ಪತ್ರಿಕಾ ಏಜೆಂಟರುಗಳಾದ ಮಧು ಕಾಯ್ಕಿಣಿ ಆನಂದ ಭಟ್ ಇವರನ್ನು ಸನ್ಮಾನಿಸಲಾಯಿತು.
ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುರುಡೇಶ್ವರದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾಧ್ಯಮ ಕ್ಷೇತ್ರ ಒಂದು ಸಾಮಾಜಿಕ ಶಕ್ತಿಯಾಗಿದ್ದು, ಸಮಾಜವನ್ನು ಒಟ್ಟುಗೂಡಿಸುತ್ತದೆ. ಪತ್ರಕರ್ತ ಮಾತ್ರ ಗುಣಮಟ್ಟದ ಸುದ್ದಿಯನ್ನು ನೀಡಬಲ್ಲ. ಆದರೆ ಸಾಮಾಜಿಕ ಜಾಲತಾಣಕ್ಕೆ ಇದು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು.
ಸುಬ್ರಾಯ ಭಟ್ ಬಕ್ಕಳ ಹಾಗೂ ನರಸಿಂಹ ಸಾತೊಡ್ಡಿಯವರಿಗೆ ಕ್ರಮವಾಗಿ ಕೆ.ಶಾಮರಾವ್ ಹಾಗೂ ಅಜ್ಜೀಬಳ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ, ಹಿರಿಯ ಪತ್ರಕರ್ತ ಜಿ.ಯು.ಭಟ್, ಆರ್ಎನ್ಎಸ್ ಶಿಕ್ಷ ಣ ಸಂಸ್ಥೆಯ ನಿರ್ದೇಶಕ ಎಂ.ವಿ.ಹೆಗಡೆ, ಹ್ಯೂಮನ್ ವೆಲ್ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ ಡಾ.ಅಮೀನುದ್ದಿನ್ ಗೌಡಾ ಮಾತನಾಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ ಅಧ್ಯಕ್ಷ ತೆ ವಹಿಸಿದ್ದರು. ಭಟ್ಕಳ ಸಂಘದ ಅಧ್ಯಕ್ಷ ಭಾಸ್ಕರ ನಾಯ್ಕ ಉಪಸ್ಥಿತರಿದ್ದರು. ನರಸಿಂಹ ಅಡಿ ಸ್ವಾಗತಿಸಿದರು. ಕೃಷ್ಣಮೂರ್ತಿ ಹೆಬ್ಬಾರ ನಿರೂಪಿಸಿದರು. ಕಾರ್ಯದರ್ಶಿ ಮೋಹನ ನಾಯ್ಕ ವಂದಿಸಿದರು. ಈ ಸಂದರ್ಭದಲ್ಲಿ ಪತ್ರಿಕಾ ಏಜೆಂಟರುಗಳಾದ ಮಧು ಕಾಯ್ಕಿಣಿ ಆನಂದ ಭಟ್ ಇವರನ್ನು ಸನ್ಮಾನಿಸಲಾಯಿತು.