ಆ್ಯಪ್ನಗರ

ಹೆಗಡೆಗೆ ತಪ್ಪಿದ ಸಚಿವ ಸ್ಥಾನ, ಕ್ಷೇತ್ರದ ಜನರಿಗೆ ನಿರಾಸೆ

ಕಾರವಾರ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 4.75 ಲಕ್ಷಕ್ಕೂ ಹೆಚ್ಚು ಮತಗಳ ಭಾರಿ ಅಂತರದಿಂದ ಗೆದ್ದಿದ್ದರೂ ಸಹ ಅನಂತಕುಮಾರ ಹೆಗಡೆ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ.

Vijaya Karnataka 31 May 2019, 5:00 am
ಕಾರವಾರ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 4.75 ಲಕ್ಷಕ್ಕೂ ಹೆಚ್ಚು ಮತಗಳ ಭಾರಿ ಅಂತರದಿಂದ ಗೆದ್ದಿದ್ದರೂ ಸಹ ಅನಂತಕುಮಾರ ಹೆಗಡೆ ಅವರಿಗೆ ಈ ಬಾರಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ.
Vijaya Karnataka Web the minister who missed the seat disappointed the people of the constituency
ಹೆಗಡೆಗೆ ತಪ್ಪಿದ ಸಚಿವ ಸ್ಥಾನ, ಕ್ಷೇತ್ರದ ಜನರಿಗೆ ನಿರಾಸೆ


ಕಳೆದ ಅವಧಿಯಲ್ಲಿ ಕೌಶಲ್ಯಾಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದ ಹೆಗಡೆ ಅವರಿಗೆ ಈ ಬಾರಿಯೂ ಸಚಿವ ಸ್ಥಾನ ಸಿಗಬಹುದೆಂಬ ನಿರೀಕ್ಷೆ ಕ್ಷೇತ್ರದ ಜನರಲ್ಲಿತ್ತು. ಆದರೆ ಹೆಗಡೆ ಅವರನ್ನು ಕೈ ಬಿಟ್ಟಿರುವುದು ನಿರಾಸೆ ಮೂಡಿಸಿದೆ.

ಹೊಸಬರಿಗೆ ಅವಕಾಶ : ಈ ಬಾರಿ ರಾಜ್ಯದಿಂದ ಸಚಿವ ಸ್ಥಾನ ಗಳಿಸಿಕೊಂಡವರ ಪೈಕಿ ಪ್ರಹ್ಲಾದ್‌ ಜೋಶಿ ಮತ್ತು ಸುರೇಶ ಅಂಗಡಿ ಹಿರಿಯ ಸಂಸದರಾಗಿದ್ದಾರೆ. ಆದರೆ ಇದುವರೆಗೂ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೆಗಡೆ ಅವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಇನ್ನು ಅನಂತಕುಮಾರ ಹೆಗಡೆ ಅವರ ಕೆಲ ವಿವಾದಾತ್ಮಕ ಹೇಳಿಕೆಗಳು ಕೂಡ ಅವರನ್ನು ಸಚಿವ ಸ್ಥಾನದಿಂದ ದೂರವಿಡಲು ಕಾರಣವಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ