ಶಿರಸಿ : ಪ್ರಸಕ್ತ ವಿಧಾನಸಭೆ ಅಧಿವೇಶನದಲ್ಲಿಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಸರಕಾರಕ್ಕೆ ಮನದಟ್ಟು ಮಾಡಲು ಜಿಲ್ಲೆಯ ಶಾಸಕರು ಸ್ಪಂದಿಸದೇ ಇರುವುದು ಖೇದಕರ ಸಂಗತಿ ಎಂದು ಜಿಲ್ಲಾಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅರಣ್ಯ ಅತಿಕ್ರಮಣದಾರರಿಗೆ ಅರಣ್ಯಾಧಿಕಾರಿಗಳಿಂದ ಉಂಟಾಗುತ್ತಿರುವ ಕಿರುಕುಳ, ದೌರ್ಜನ್ಯ, ಕಾನೂನು ಬಾಹಿರ ಕೃತ್ಯದ ಕುರಿತು ಸಮಗ್ರವಾಗಿ ಚರ್ಚಿಸಿದ್ದರು. ಈ ವೇಳೆ ಬೇರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಆಯಾ ಭಾಗದ ಶಾಸಕರು ಪಕ್ಷಾತೀತವಾಗಿ ಸರಕಾರದ ಗಮನ ಹಾಗೂ ಒತ್ತಡ ತರುವಲ್ಲಿಯಶಸ್ವಿ ಆಗಿದ್ದರು. ಆದರೆ ಉತ್ತರ ಕನ್ನಡ ಜಿಲ್ಲೆಪ್ರತಿನಿಧಿಸುವ ಶಾಸಕರು ಇಂಥ ಗಂಭೀರ ವಿಷಯವನ್ನು ವಿಧಾನಸಭೆಯಲ್ಲಿಮಂಡಿಸಿ ಜಿಲ್ಲೆಯ ಅತಿಕ್ರಮಣದಾರರ ಸಮಸ್ಯೆಗೆ ಸ್ಪಂದಿಸಬೇಕಿತ್ತು ಎಂದು ಅವರು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿ್ಲಸಿ ಜಿ.ಪಿ.ಎಸ್. ಸರ್ವೇ ಆಗಿ ಮಂಜೂರಿ ಪ್ರಕ್ರಿಯೆಯಲ್ಲಿರುವಂಥ ಅರಣ್ಯ ಅತಿಕ್ರಮಣದಾರರು ತಮ್ಮ ಕಬ್ಜಾ ಭೋಗ್ವಟೆಗೆ, ವಾಸ್ತವ್ಯದ ಇಮಾರತುಗಳ ಮತ್ತು ಜೀರ್ಣಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿಗೂ ನಿರಂತರ ಅರಣ್ಯಾಧಿಕಾರಿಗಳಿಂದ ಜಿಲ್ಲೆಯಲ್ಲಿತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ಹಕ್ಕು ಕಾಯಿದೆಯಡಿ ಮಂಜೂರಿ ಕುರಿತು ಕಾನೂನಾತ್ಮಕ ಅಂಶ ಹಾಗೂ ಅರಣ್ಯ ಸಿಬ್ಬಂದಿ ಕಿರುಕುಳ ಕುರಿತು ಮುಂದಿನ ದಿನಗಳಲ್ಲಿಸಮಗ್ರವಾಗಿ ಜಿಲ್ಲಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅರಣ್ಯಭೂಮಿ ಮೇಲೆ ವಾಸ್ತವ್ಯ ಮತ್ತು ಸಾಗುವಳಿಗಾಗಿ ಅರಣ್ಯವಾಸಿಗಳ ಪರವಾಗಿ ಕಾನೂನಾತ್ಮಕ ಹೋರಾಟ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
74,220 ಅರ್ಜಿಗಳು ತಿರಸ್ಕೃತ : ಉತ್ತರ ಕನ್ನಡ ಜಿಲ್ಲೆಯಲ್ಲಿಒಟ್ಟು 85,575 ಅರಣ್ಯ ಅತಿಕ್ರಮಣದಾರರ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ74,220 ಅರ್ಜಿಗಳು ತಿರಸ್ಕಾರವಾಗಿವೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿಮಂಜೂರಿಗೆ ಸಂಬಂಧಿಸಿದ ಮಾನದಂಡದ ಕುರಿತು ಚರ್ಚಿಸದೇ ಇರುವುದು ವಿಷಾದಕರ ಎಂದು ರವೀಂದ್ರ ನಾಯ್ಕ ಪ್ರಕಟಣೆಯಲ್ಲಿತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅರಣ್ಯ ಅತಿಕ್ರಮಣದಾರರಿಗೆ ಅರಣ್ಯಾಧಿಕಾರಿಗಳಿಂದ ಉಂಟಾಗುತ್ತಿರುವ ಕಿರುಕುಳ, ದೌರ್ಜನ್ಯ, ಕಾನೂನು ಬಾಹಿರ ಕೃತ್ಯದ ಕುರಿತು ಸಮಗ್ರವಾಗಿ ಚರ್ಚಿಸಿದ್ದರು. ಈ ವೇಳೆ ಬೇರೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಆಯಾ ಭಾಗದ ಶಾಸಕರು ಪಕ್ಷಾತೀತವಾಗಿ ಸರಕಾರದ ಗಮನ ಹಾಗೂ ಒತ್ತಡ ತರುವಲ್ಲಿಯಶಸ್ವಿ ಆಗಿದ್ದರು. ಆದರೆ ಉತ್ತರ ಕನ್ನಡ ಜಿಲ್ಲೆಪ್ರತಿನಿಧಿಸುವ ಶಾಸಕರು ಇಂಥ ಗಂಭೀರ ವಿಷಯವನ್ನು ವಿಧಾನಸಭೆಯಲ್ಲಿಮಂಡಿಸಿ ಜಿಲ್ಲೆಯ ಅತಿಕ್ರಮಣದಾರರ ಸಮಸ್ಯೆಗೆ ಸ್ಪಂದಿಸಬೇಕಿತ್ತು ಎಂದು ಅವರು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿ್ಲಸಿ ಜಿ.ಪಿ.ಎಸ್. ಸರ್ವೇ ಆಗಿ ಮಂಜೂರಿ ಪ್ರಕ್ರಿಯೆಯಲ್ಲಿರುವಂಥ ಅರಣ್ಯ ಅತಿಕ್ರಮಣದಾರರು ತಮ್ಮ ಕಬ್ಜಾ ಭೋಗ್ವಟೆಗೆ, ವಾಸ್ತವ್ಯದ ಇಮಾರತುಗಳ ಮತ್ತು ಜೀರ್ಣಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿಗೂ ನಿರಂತರ ಅರಣ್ಯಾಧಿಕಾರಿಗಳಿಂದ ಜಿಲ್ಲೆಯಲ್ಲಿತೊಂದರೆ ಅನುಭವಿಸುತ್ತಿದ್ದಾರೆ. ಅರಣ್ಯ ಹಕ್ಕು ಕಾಯಿದೆಯಡಿ ಮಂಜೂರಿ ಕುರಿತು ಕಾನೂನಾತ್ಮಕ ಅಂಶ ಹಾಗೂ ಅರಣ್ಯ ಸಿಬ್ಬಂದಿ ಕಿರುಕುಳ ಕುರಿತು ಮುಂದಿನ ದಿನಗಳಲ್ಲಿಸಮಗ್ರವಾಗಿ ಜಿಲ್ಲಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅರಣ್ಯಭೂಮಿ ಮೇಲೆ ವಾಸ್ತವ್ಯ ಮತ್ತು ಸಾಗುವಳಿಗಾಗಿ ಅರಣ್ಯವಾಸಿಗಳ ಪರವಾಗಿ ಕಾನೂನಾತ್ಮಕ ಹೋರಾಟ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
74,220 ಅರ್ಜಿಗಳು ತಿರಸ್ಕೃತ : ಉತ್ತರ ಕನ್ನಡ ಜಿಲ್ಲೆಯಲ್ಲಿಒಟ್ಟು 85,575 ಅರಣ್ಯ ಅತಿಕ್ರಮಣದಾರರ ಅರ್ಜಿಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ74,220 ಅರ್ಜಿಗಳು ತಿರಸ್ಕಾರವಾಗಿವೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿಮಂಜೂರಿಗೆ ಸಂಬಂಧಿಸಿದ ಮಾನದಂಡದ ಕುರಿತು ಚರ್ಚಿಸದೇ ಇರುವುದು ವಿಷಾದಕರ ಎಂದು ರವೀಂದ್ರ ನಾಯ್ಕ ಪ್ರಕಟಣೆಯಲ್ಲಿತಿಳಿಸಿದ್ದಾರೆ.