ಆ್ಯಪ್ನಗರ

ಉದ್ಯೋಗ ಮೇಳದಲ್ಲಿ ಸಾವಿರಾರು ಜನ ಭಾಗಿ

ಶಿರಸಿ : ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.

Vijaya Karnataka 4 Aug 2019, 5:00 am
ಶಿರಸಿ : ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.
Vijaya Karnataka Web thousands of people at the job fair
ಉದ್ಯೋಗ ಮೇಳದಲ್ಲಿ ಸಾವಿರಾರು ಜನ ಭಾಗಿ


ಆಳ್ವಾ ಫೌಂಡೇಶನ್‌ ಹಾಗೂ ಮೆರಿಟೂಡ್‌ ಉದ್ಯೋಗ ಸಹಯೋಗದಲ್ಲಿ ಮೇಳ ಆಯೋಜಿಸಲಾಗಿತ್ತು. 25ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು.

ಜಿಲ್ಲೆಯ ಯುವಜನತೆಯಲ್ಲಿ ಪ್ರತಿಭೆ ಇದೆ. ಆದರೆ ಅವರು ಅವಕಾಶಕ್ಕಾಗಿ ಹೊರ ಜಿಲ್ಲೆಗಳತ್ತ ಮುಖ ಮಾಡುವಂತಾಗಿದೆ. ಅವರಿಗೆ ಇಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವುದಕ್ಕೆ ಆಳ್ವಾ ಫೌಂಡೇಶನ್‌ ಕಾರ್ಯ ಮಾಡುತ್ತಿದೆ ಎಂದು ಮೇಳ ಉದ್ಘಾಟಿಸಿದ ಫೌಂಡೇಶನ್‌ ಮುಖ್ಯಸ್ಥ ನಿವೇದಿತ ಆಳ್ವಾ ತಿಳಿಸಿದರು.

ಬೆಂಗಳೂರು ಮತ್ತು ಬೆಂಗಳೂರಿನಲ್ಲಿರುವ ಸಂಸ್ಥೆಗಳು ಇಲ್ಲಿಗೆ ಬಂದು ನಮ್ಮ ಪ್ರತಿಭೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಸಂಸ್ಥೆಗಳು ಜಿಲ್ಲೆಯಲ್ಲಿ ಲಭ್ಯವಿರುವ ಉದ್ಯೋಗಕ್ಕೆ ಆದ್ಯತೆ ನೀಡಲಿವೆ ಎಂದರು. ಸತೀಶ ನಾಯ್ಕ, ಫಯಾಜ್‌ ಅಹಮ್ಮದ್‌ ಮುಂತಾದವರು ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ