ಆ್ಯಪ್ನಗರ

ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸರಿಪಡಿಸಲು ಸೂಚನೆ

ಕಾರವಾರ : ಕೆಲ ಭಾಗದಲ್ಲಿ ಸ್ಥಗಿತಗೊಂಡಿರುವ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸೇವೆಯನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಸೂಚಿಸಿದ್ದಾರೆ.

Vijaya Karnataka 14 Aug 2019, 5:00 am
ಕಾರವಾರ : ಕೆಲ ಭಾಗದಲ್ಲಿ ಸ್ಥಗಿತಗೊಂಡಿರುವ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸೇವೆಯನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಸೂಚಿಸಿದ್ದಾರೆ.
Vijaya Karnataka Web tip to troubleshoot the bscennel network
ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸರಿಪಡಿಸಲು ಸೂಚನೆ


ಉತ್ತರ ಕನ್ನಡ ಜಿಲ್ಲೆಯಲ್ಲಿ 70 ಬಿಎಸ್‌ಎನ್‌ಎಲ್‌ ಟವರ್‌ ವಿವಿಧ ಕಾರಣಗಳಿಂದ ಕೆಲಸ ನಿರ್ವಹಿಸುತ್ತಿಲ್ಲ. ಹೀಗಾಗಿ ನೆರೆ ಸಂತ್ರಸ್ತರಿಗೆ ಸಂಪರ್ಕ ಸಾಧಿಸಲು ಕಷ್ಟವಾಗಿದೆ. ಬಿಎಸ್‌ಎನ್‌ಎಲ್‌ ಕುರಿತು ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಅಲ್ಲಿನ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲ ಟವರ್‌ಗಳು ಕೆಲಸ ಮಾಡುವಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಟವರ್‌ ಸಮಸ್ಯೆ ಬಗೆ ಹರಿಯದಿದ್ದರೆ ಸಂಬಂಧಿಸಿದ ಅಧಿಕಾರಿಯ ನಿರ್ಲಕ್ಷ್ಯದ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಸರಕಾರಕ್ಕೆ ಮಾಹಿತಿ ನೀಡುವುದಾಗಿ ಎಚ್ಚರಿಸಿದ ಬಗ್ಗೆ ತಿಳಿದು ಬಂದಿದೆ.

ಇದಾದ ನಂತರ ಇನ್ನೆರಡು ದಿನಗಳಲ್ಲಿ ಎಲ್ಲ ಟವರ್‌ ಸಮಸ್ಯೆ ಬಗೆಹರಿಸಿ ಸಂಪರ್ಕ ಸಾಧನಕ್ಕೆ ಅನುಕೂಲ ಮಾಡಿ ಕೊಡುವುದಾಗಿ ಬಿಎಸ್‌ಎನ್‌ಎಲ್‌ನ ಹಿರಿಯ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ