ಆ್ಯಪ್ನಗರ

ಕಾರವಾರದಲ್ಲಿ ಧಾರಾಕಾರ ಮಳೆ

ಕಾರವಾರ : ನಗರದಲ್ಲಿ ಗುರುವಾರ ಬೆಳಗಿನ ಜಾವ 2 ತಾಸಿಗೂ ಹೆಚ್ಚು ಸುರಿದ ಧಾರಾಕಾರ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತು. ಮಳೆ ನೀರು ನುಗ್ಗಿದ ಪರಿಣಾಮ ಇಲ್ಲಿನ ಬಾಜಾರ್‌ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿಗಳ ಒಳಗೆ ನೀರು ನಿಂತು ವಿದ್ಯಾರ್ಥಿಗಳು ಪರದಾಡುವಂತಾಯಿತು. ನೆಲವೆಲ್ಲ ನೀರಿನಿಂದ ತುಂಬಿಕೊಂಡ ಹಿನ್ನೆಲೆಯಲ್ಲಿ ಪಾಠ ಕೇಳಲು ಕುಳಿತುಕೊಳ್ಳುವುದಕ್ಕೆ ಜಾಗವಿಲ್ಲದೇ ಮಕ್ಕಳು ತೊಂದರೆ ಅನುಭವಿಸಿದರು.

Vijaya Karnataka 21 Jun 2019, 5:00 am
ಕಾರವಾರ : ನಗರದಲ್ಲಿ ಗುರುವಾರ ಬೆಳಗಿನ ಜಾವ 2 ತಾಸಿಗೂ ಹೆಚ್ಚು ಸುರಿದ ಧಾರಾಕಾರ ಮಳೆಯಿಂದ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತು. ಮಳೆ ನೀರು ನುಗ್ಗಿದ ಪರಿಣಾಮ ಇಲ್ಲಿನ ಬಾಜಾರ್‌ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿಗಳ ಒಳಗೆ ನೀರು ನಿಂತು ವಿದ್ಯಾರ್ಥಿಗಳು ಪರದಾಡುವಂತಾಯಿತು. ನೆಲವೆಲ್ಲ ನೀರಿನಿಂದ ತುಂಬಿಕೊಂಡ ಹಿನ್ನೆಲೆಯಲ್ಲಿ ಪಾಠ ಕೇಳಲು ಕುಳಿತುಕೊಳ್ಳುವುದಕ್ಕೆ ಜಾಗವಿಲ್ಲದೇ ಮಕ್ಕಳು ತೊಂದರೆ ಅನುಭವಿಸಿದರು.
Vijaya Karnataka Web torrential rain in karawara
ಕಾರವಾರದಲ್ಲಿ ಧಾರಾಕಾರ ಮಳೆ


ಶಾಲಾ ಕೊಠಡಿಗಳ ಕಿಟಕಿ ಬಾಗಿಲು ಸರಿ ಇಲ್ಲದ ಕಾರಣ ಈ ರೀತಿ ಆಗುತ್ತಿದ್ದು, ಶಿಕ್ಷ ಣ ಅಧಿಕಾರಿಗಳು ಕೂಡಲೇ ಈ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಪಾಲಕರು ಆಗ್ರಹಿಸಿದರು. ಕ್ಷೇತ್ರ ಶಿಕ್ಷ ಣಾಧಿಕಾರಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮುಳುಗಿದ ರಸ್ತೆ: ಇಲ್ಲಿನ ಮುಲ್ಲಾ ಸ್ಟಾಪ್‌ ಬಳಿ ಇತ್ತೀಚೆಗೆ ಅವೈಜ್ಞಾನಿಕವಾಗಿ ಸಿಮೆಂಟ್‌ ರಸ್ತೆ ನಿರ್ಮಿಸಿದ್ದರಿಂದ ಚರಂಡಿಗೆ ನೀರು ಸೇರುತ್ತಿಲ್ಲ. ಧಾರಾಕಾರವಾಗಿ ಸುರಿದ ಮಳೆಯ ನೀರು ರಸ್ತೆಯಲ್ಲಿ ಹೊಳೆಯಂತೆ ಹರಿದು ಸಂಚಾರಿಗಳು ಸಂಕಷ್ಟ ಅನುಭವಿಸುವಂತಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ