ಆ್ಯಪ್ನಗರ

ಕಾರವಾರಕ್ಕೆ ಪ್ರವಾಸಿಗರು ಬರೋದು ಬೇಡ: ಜಿಲ್ಲಾಧಿಕಾರಿ ಸೂಚನೆ

ಉತ್ತರ ಕನ್ನಡದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಗ್ರಾಮಗಳು ಜಲಾವೃತಗೊಂಡಿವೆ. ರಸ್ತೆಗಳ ಮೇಲೆ ನೀರು ತುಂಬಿ ಸಂಪರ್ಕವೇ ಕಡಿತಗೊಂಡಿವೆ. ಹೀಗಾಗಿ ಪ್ರವಾಸಕ್ಕೆ ಇದು ಸೂಕ್ತ ಸಮಯವಲ್ಲ.

Vijaya Karnataka Web 7 Aug 2019, 7:30 pm
ಕಾರವಾರ: ಜಿಲ್ಲೆಯಾದ್ಯಂತ ಮಳೆ ಹಾಗೂ ಅದರಿಂದಾಗುವ ಹಾನಿಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬರಬಾರು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Vijaya Karnataka Web ನದಿಯಂತಾಗಿರುವ ರಸ್ತೆಗಳು
ನದಿಯಂತಾಗಿರುವ ರಸ್ತೆಗಳು


ಮುಂದಿನ ಮೂರು ದಿನಗಳು ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ತಮ್ಮ ಪ್ರಯಾಣ ಮೂಂದೂಡುವಂತೆ ಹಾಗೂ ಮುಂದಿನ ಮೂರು ದಿನಗಳು ಹೊರ ಜಿಲ್ಲೆಯಿಂದ ಯಾವ ಪ್ರವಾಸಿಗರು ಜಿಲ್ಲೆಗೆ ಬಾರದಂತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ಮನವಿ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಪ್ರವೇಶಿಸುವ ಎಲ್ಲ ರಸ್ತೆಗಳಲ್ಲೂ ಪ್ರವಾಹ, ಗುಡ್ಡ ಕುಸಿತ ಅಥವಾ ಮರ ಬೀಳುವ ಅಪಾಯಕಾರಿ ಸಂದರ್ಭಗಳೇ ಹೆಚ್ಚಿರುವುದರಿಂದ ಈ ದಿನಗಳಲ್ಲಿ ಪ್ರಯಾಣಮಾಡಿ ಸಂಕಷ್ಟಕ್ಕೆ ಗುರಿಯಾಗಬಾರದೆಂದು ಹಾಗೂ ಅಂತಹ ದುಸ್ಸಾಹಸಕ್ಕೆ ಕೈಹಾಕಬಾರದೆಂದು ಹರೀಶ್‌ ಕುಮಾರ್ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ