ಆ್ಯಪ್ನಗರ

ಅರಣ್ಯಕ್ಕೆ ಬೆಂಕಿ ಹಾಕಿದ ಇಬ್ಬರ ಸೆರೆ

ಯಲ್ಲಾಪುರ : ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ತಾಲೂಕಿನ ಹನುಮನಕೋಟೆಯಲ್ಲಿ ಶುಕ್ರವಾರ ನಡೆದಿದೆ. ಇಬ್ಬರೂ ಯಲ್ಲಾಪುರ ಅರಣ್ಯ ವಲಯದ ಕಣ್ಣಿಗೇರಿ ಶಾಖಾ ವ್ಯಾಪ್ತಿಯ ಹನುಮನಕೋಟೆ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕುತ್ತಿದ್ದರು. ಸುರೇಶ ನಿಂಗಪ್ಪಾ ವಡ್ಡರ್‌ ಹಾಗೂ ಬಾಬು ನಾಗೇಂದ್ರ ಬರಡಿ, ಕೇರವಾಡ ಎನ್ನುವ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

Vijaya Karnataka 17 May 2019, 10:40 pm
ಯಲ್ಲಾಪುರ : ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ತಾಲೂಕಿನ ಹನುಮನಕೋಟೆಯಲ್ಲಿ ಶುಕ್ರವಾರ ನಡೆದಿದೆ. ಇಬ್ಬರೂ ಯಲ್ಲಾಪುರ ಅರಣ್ಯ ವಲಯದ ಕಣ್ಣಿಗೇರಿ ಶಾಖಾ ವ್ಯಾಪ್ತಿಯ ಹನುಮನಕೋಟೆ ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕುತ್ತಿದ್ದರು. ಸುರೇಶ ನಿಂಗಪ್ಪಾ ವಡ್ಡರ್‌ ಹಾಗೂ ಬಾಬು ನಾಗೇಂದ್ರ ಬರಡಿ, ಕೇರವಾಡ ಎನ್ನುವ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
Vijaya Karnataka Web two prisoners who set fire to the forest
ಅರಣ್ಯಕ್ಕೆ ಬೆಂಕಿ ಹಾಕಿದ ಇಬ್ಬರ ಸೆರೆ


ಉಪ ಅರಣ್ಯ ಸಂರಕ್ಷ ಣಾಧಿಕಾರಿ ಆರ್‌.ಜಿ.ಭಟ್ಟ, ಎಸಿಎಫ್‌ ಅಶೋಕ ಭಟ್ಟ ಹಾಗೂ ವಲಯ ಅರಣ್ಯಾಧಿಕಾರಿ ಬಾಲಸುಬ್ರಹ್ಮಣ್ಯಂ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳಾದ ಶ್ರೀನಿವಾಸ ನಾಯ್ಕ್‌, ನಾಗರಾಜ ಕಲ್ಗುಟ್ಕರ್‌, ಬಸವರಾಜ್‌ ಆಡೀನ್‌, ಚೆನ್ನಬಸು ಮುಂತಾದವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ