ಆ್ಯಪ್ನಗರ

ಕೇಂದ್ರ ಸಚಿವರ ಹೇಳಿಕೆಗೆ ಖಂಡನೆ

ಅಂಕೋಲಾ : ಸಚ್ಚಾರಿತ್ರ್ಯ ಹೊಂದಿದ್ದ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿರುವಂತಹ ಸಚಿವ ಆರ್‌.ವಿ.ದೇಶಪಾಂಡೆ ಅವರ ಕುರಿತು ಅವಹೇಳನಕಾರಿಯಾಗಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮಾತನಾಡುವುದನ್ನು ಬಿಟ್ಟು ಅಭಿವೃದ್ಧಿಯ ಕುರಿತು ಮಾತನಾಡಲಿ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಾಂಡುರಂಗ ಗೌಡ ಹೇಳಿದರು.

Vijaya Karnataka 1 Feb 2019, 5:00 am
ಅಂಕೋಲಾ : ಸಚ್ಚಾರಿತ್ರ್ಯ ಹೊಂದಿದ್ದ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿರುವಂತಹ ಸಚಿವ ಆರ್‌.ವಿ.ದೇಶಪಾಂಡೆ ಅವರ ಕುರಿತು ಅವಹೇಳನಕಾರಿಯಾಗಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮಾತನಾಡುವುದನ್ನು ಬಿಟ್ಟು ಅಭಿವೃದ್ಧಿಯ ಕುರಿತು ಮಾತನಾಡಲಿ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಾಂಡುರಂಗ ಗೌಡ ಹೇಳಿದರು.
Vijaya Karnataka Web union ministers statement condemned
ಕೇಂದ್ರ ಸಚಿವರ ಹೇಳಿಕೆಗೆ ಖಂಡನೆ


ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸಚಿವರು ಚುನಾವಣೆಯಲ್ಲಿ ಆಯ್ಕೆಯಾಗಿ ನಾಲ್ಕು ವರ್ಷ ಕ್ಷೇತ್ರವನ್ನೆ ನೋಡದವರು ಚುನಾವಣೆ ಬಂತೆಂದರೆ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಅಗಮಿಸಿ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಎಂದರು.

ಮಾಜಿ ಜಿಪಂ ಅಧ್ಯಕ್ಷ ರಮಾನಂದ ನಾಯಕ ಮಾತನಾಡಿ, ಚುನಾವಣೆ ಬಂದಾಗ ಸುದ್ದಿಯಲ್ಲಿರುವ ವ್ಯಕ್ತಿಗಳು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನಿಲ್ಲಿಸಲಿ. ದೇಶಪಾಂಡೆ ಅವರ ಕುರಿತು ಮಾತನಾಡುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.

ಮಾಜಿ ಶಾಸಕ ಕೆ.ಎಚ್‌.ಗೌಡ, ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ, ಉಪಾಧ್ಯಕ್ಷೆ ತುಳಸಿ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಜಿಪಂ ಮಾಜಿ ಉಪಾಧ್ಯಕ್ಷ ಉದಯ ನಾಯ್ಕ, ಮಾಜಿ ತಾಪಂ ಅಧ್ಯಕ್ಷ ವಿನೋದ ಗಾಂವಕರ, ಪುರುಷೋತ್ತಮ ನಾಯ್ಕ, ವಿನೋದ ನಾಯಕ ಬಾಸಗೋಡ, ಪುರಸಭಾ ಸದಸ್ಯರು ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ