ಆ್ಯಪ್ನಗರ

ಕುವೈತ್‌ನಲ್ಲಿ ಕೊರೊನಾಗೆ ಬಲಿಯಾದ ಉತ್ತರ ಕನ್ನಡದ ವ್ಯಕ್ತಿ

ಕುವೈತ್‌ನ ಹೋಟೆಲ್‌ವೊಂದರಲ್ಲಿ ಸ್ವಾಗತಕಾರರಾಗಿ ಕೆಲಸ‌ ಮಾಡುತ್ತಿದ್ದರು. ಮೇ 24 ರಂದು ಸುಶಾಂತಗೆ ಜ್ವರ ಕಾಣಿಸಿಕೊಂಡಿತ್ತು. ಮೇ 27ರಂದು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

Vijaya Karnataka Web 3 Jun 2020, 11:24 pm
ಕಾರವಾರ: ಕುವೈತ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿಯೋರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
Vijaya Karnataka Web ಕೊರೊನಾ
ಕೊರೊನಾ


ಕಾರವಾರ ತಾಲೂಕಿನ ಸದಾಶಿವಗಡದ ಸುಶಾಂತ ಗಜಾನನ ಕಡವಾಡಕರ (39) ಮೃತಪಟ್ಟವರು. ಕಳೆದ ಸುಮಾರು 7ಕ್ಕೂ ಅಧಿಕ ವರ್ಷಗಳಿಂದ ಕುವೈತ್‌ನಲ್ಲಿ ವಾಸವಾಗಿದ್ದರು.

ಕುವೈತ್‌ನ ಹೋಟೆಲ್‌ವೊಂದರಲ್ಲಿ ಸ್ವಾಗತಕಾರರಾಗಿ ಕೆಲಸ‌ ಮಾಡುತ್ತಿದ್ದರು. ಮೇ 24 ರಂದು ಸುಶಾಂತಗೆ ಜ್ವರ ಕಾಣಿಸಿಕೊಂಡಿತ್ತು. ಮೇ 27ರಂದು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ಧೃಡಪಟ್ಟಿತ್ತು. ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಕುವೈತ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸದಾಶಿವಗಡದಲ್ಲಿರುವ ಮೃತರ ಕುಟುಂಬದವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ