ಆ್ಯಪ್ನಗರ

ವರಮಹಾಲಕ್ಷ್ಮೀ ಪೂಜೆ, ವಾರ್ಷಿಕೋತ್ಸವ

ಶಿರಸಿ : ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಇಲ್ಲಿಯ ಚಲುವಾದಿ ಸಮುದಾಯ ಭವನದಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ‍್ಯಕ್ರಮ ನಡೆಯಿತು.

Vijaya Karnataka 10 Aug 2019, 5:00 am
ಶಿರಸಿ : ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಇಲ್ಲಿಯ ಚಲುವಾದಿ ಸಮುದಾಯ ಭವನದಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ‍್ಯಕ್ರಮ ನಡೆಯಿತು.
Vijaya Karnataka Web SRS-9SRS2
ಶಿರಸಿಯ ಚಲುವಾದಿ ಸಮುದಾಯ ಭವನದಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ‍್ಯಕ್ರಮ ನಡೆಯಿತು.


ಜನಜಾಗೃತಿ ವೇದಿಕೆ ಸದಸ್ಯೆ ಸಂಧ್ಯಾ ಕುರ್ಡೇಕರ್‌ ಉದ್ಘಾಟಿಸಿದರು. ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮವು ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದು, ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಅನಿತಾ ಪರ್ವತಿಕರ್‌ ಮಾತನಾಡಿ, ಮಹಿಳೆಯರು ಕುಟುಂಬ ನಿರ್ವಹಣೆಯೊಂದಿಗೆ ತಮ್ಮಲ್ಲಿರುವ ಕೌಶಲ ಗುರುತಿಸಿಕೊಳ್ಳಲು ಇಂತಹ ಕಾರ್ಯಕ್ರಮ ಪೂರಕವಾಗಿದೆ. ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ. ಪ್ರತಿಯೊಬ್ಬ ಮಹಿಳೆಯೂ ಸ್ವ ಉದ್ಯೋಗದ ಮುಖಾಂತರ ಸ್ವಾವಲಂಬನೆ ಜತೆಗೆ ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ನೆರವಾಗಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮಗಳ ಸಮನ್ವಯಾಧಿಕಾರಿ ಗೀತಾ ಎಸ್‌. ಮಾತನಾಡಿ, ಪ್ರತಿಯೊಬ್ಬ ಮಹಿಳೆಯನ್ನು ಸಾಮಾಜಿಕ, ಶೈಕ್ಷ ಣಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ಆಸರೆಯಾಗಿದೆ. ಮಹಿಳೆ ಸಾಮಾಜಿಕ ಚಿಂತನೆಗಳಲ್ಲಿ ತೊಡಗಿಸಿಕೊಂಡು ಮಕ್ಕಳ ಏಳಿಗೆಗೆ ಸಹಕಾರಿಯಾಗಬೇಕು ಎಂದರು.

ರಾಮನಬೈಲ್‌ ಒಕ್ಕೂಟದ ಅಧ್ಯಕ್ಷೆ ಕಲ್ಪನಾ ಅಧ್ಯಕ್ಷ ತೆ ವಹಿಸಿದ್ದರು. ಭವಾನಿ ಸ್ವಾಗತಿಸಿದರು. ಸೇವಾಪ್ರತಿನಿಧಿ ನಾಗರತ್ನ ನಿರೂಪಿಸಿದರು. ಶಿವಗಂಗೆ ವಂದಿಸಿದರು.

ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ವಿವಿಧ ಆಟೋಟ ಹಾಗೂ ರಂಗೋಲಿ, ಅಲಂಕಾರಿಕ ವಸ್ತುಗಳ ತಯಾರಿಕಾ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ