ಆ್ಯಪ್ನಗರ

ನಿನ್ನೆ ಕುಮಟಾ, ಇಂದು ಶಿರಸಿ ಧಗಧಗ

ಹೊನ್ನಾವರದ ಪರೇಶ್ ಮೆಸ್ತಾ ಹತ್ಯೆ ಖಂಡಿಸಿ ಮಂಗಳವಾರ ಶಿರಸಿ ಬಂದ್‌ ಆಚರಣೆಗೆ ಹಿಂದುಪರ ಸಂಘಟನೆ ಹಾಗೂ ಬಿಜೆಪಿ ಮುಖಂಡರು ಮುಂದಾದರು.

Vijaya Karnataka Web 12 Dec 2017, 1:14 pm
ಶಿರಸಿ: ಹೊನ್ನಾವರದ ಪರೇಶ್ ಮೆಸ್ತಾ ಹತ್ಯೆ ಖಂಡಿಸಿ ಮಂಗಳವಾರ ಶಿರಸಿ ಬಂದ್‌ ಆಚರಣೆಗೆ ಹಿಂದುಪರ ಸಂಘಟನೆ ಹಾಗೂ ಬಿಜೆಪಿ ಮುಖಂಡರು ಮುಂದಾದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.
Vijaya Karnataka Web violence in sirasi
ನಿನ್ನೆ ಕುಮಟಾ, ಇಂದು ಶಿರಸಿ ಧಗಧಗ


ನಗರದ ವಿಕಾಸಾಶ್ರಮ ಬಯಲಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಆದರೆ, ಮೆರವಣಿಗೆ ನಡೆಸಲು ಪೊಲೀಸರು ಅವಕಾಶ ನೀಡದೇ, ನಿರಾಕರಿಸಿದರು. ಮೆರವಣಿಗೆ ನಡೆಸುವುದಾಗಿ ಪ್ರತಿಭಟನಾನಿರತರು ಪಟ್ಟು ಹಿಡಿದಿದ್ದು, ರಸ್ತೆಯಲ್ಲಿ ಧರಣಿ ಕುಳಿತರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಲು ಮುಂದಾದಾಗ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪ್ರತಿಭಟನೆಯಲ್ಲಿ ತೊಡಗಿದ್ದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಬಂಧಿಸಲಾಯಿತು. ಪ್ರತಿಭಟನಾನಿರತ ಗುಂಪು ಚದುರಿಸಲು ಪೊಲೀಸರು ಮುಂದಾದಾಗ ಕಲ್ಲು ತೂರಾಟ ಪ್ರಾರಂಭವಾಯಿತು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು ಲಾಠಿ ಚಾರ್ಜ್ ನಡೆಸಿದರು.

ನಗರದ ವಿವಿಧ ಬಡಾವಣೆಗಳಲ್ಲಿ ಜನರ ಗುಂಪು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯಲ್ಲಿ ಕಲ್ಲಿನೇಟು ಬಿದ್ದು, ಇಬ್ಬರು ವರದಿಗಾರರು ಸೇರಿದಂತೆ ಹಲವು ಜನರಿಗೆ ಗಾಯಗಳಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ