ಕಾರವಾರ : ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅ.28ರಂದು ಜಿಲ್ಲೆಯ 26 ಮತಗಟ್ಟೆಗಳಲ್ಲಿಮತದಾನ ನಡೆಸಲಾಗುವುದೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ತಿಳಿಸಿದರು.
ಕೋವಿಡ್ ಮಾರ್ಗಸೂಚಿ ಪಾಲನೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಕೋವಿಡ್-19ರ ಸಂದಿಗ್ಧ ಪರಿಸ್ಥಿತಿಯಲ್ಲಿಪ್ರಥಮ ಬಾರಿ ಚುನಾವಣೆ ನಡೆಯುತ್ತಿರುವುದರಿಂದ 1 ಸಾವಿರ ಮತದಾರರಿಗೆ ಒಂದರಂತೆ ಮತಗಟ್ಟೆ ಸ್ಥಾಪಿಸಲಾಗುತ್ತಿದೆ. ಜಿಲ್ಲೆಯ 23 ಮೂಲ ಹಾಗೂ 3 ಹೆಚ್ಚುವರಿ ಮತಗಟ್ಟೆ ಸೇರಿಸಿ ಒಟ್ಟು 26 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಭಾರತ ಚುನಾವಣಾ ಆಯೋಗವು ಕೋವಿಡ್-19ರ ಹಿನ್ನೆಲೆಯಲ್ಲಿಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಮತದಾನ ನಡೆಸಲಾಗುವುದೆಂದು ಹೇಳಿದರು.
ಮಾದರಿ ನೀತಿ ಸಂಹಿತೆ ತಂಡ ರಚನೆ: ಕರ್ನಾಟಕ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಅ.28ರಂದು ಮತದಾನ ನಡೆಯಲಿದ್ದು, ನ.2ರಂದು ಮತ ಎಣಿಕೆ ಕಾರ್ಯ ನಡೆಸಲಾಗುವುದು. ಸೆ.29ರಿಂದಲೇ ಜಿಲ್ಲಾದ್ಯಂತ ಮಾದರಿ ನೀತಿಸಂಹಿತೆ ಜಾರಿಯಾಗಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿರುವಂತಹ ಮಾದರಿ ನೀತಿ ಸಂಹಿತೆ ಈಗಲೂ ಅನ್ವಯಿಸುತ್ತದೆ. ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಮಾದರಿ ನೀತಿ ಸಂಹಿತೆ ತಂಡ ರಚಿಸಿ ಆದೇಶ ಹೊರಡಿಸಲಾಗುವುದು ಎಂದರು.
ಸೂಕ್ತ ಕ್ರಮ: ಈ ಆದೇಶದನ್ವಯ ನಿಯೋಜಿತ ಪ್ರತಿ ತಂಡಕ್ಕೆ ಒಬ್ಬ ವಿಡಿಯೋಗ್ರಾಪರ್ ನೇಮಿಸಿ, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿವಿಡಿಯೋಗ್ರಾಫರ್ ಸಹಾಯದಿಂದ ಚಿತ್ರೀಕರಿಸಿ, ಆಯೋಗದ ಅಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರು. ಮಾದರಿ ನೀತಿಸಂಹಿತೆ ಎಲ್ಲಜನಪ್ರತಿನಿಧಿಗಳಿಗೂ ಅನ್ವಯಿಸುತ್ತಿದ್ದು, ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದೊಂದಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಗುರುತಿಸಿಕೊಂಡಲ್ಲಿಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರದಲ್ಲಿತೊಡಗಿದ್ದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಕೋವಿಡ್ ಮಾರ್ಗಸೂಚಿ ಪಾಲನೆ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಕೋವಿಡ್-19ರ ಸಂದಿಗ್ಧ ಪರಿಸ್ಥಿತಿಯಲ್ಲಿಪ್ರಥಮ ಬಾರಿ ಚುನಾವಣೆ ನಡೆಯುತ್ತಿರುವುದರಿಂದ 1 ಸಾವಿರ ಮತದಾರರಿಗೆ ಒಂದರಂತೆ ಮತಗಟ್ಟೆ ಸ್ಥಾಪಿಸಲಾಗುತ್ತಿದೆ. ಜಿಲ್ಲೆಯ 23 ಮೂಲ ಹಾಗೂ 3 ಹೆಚ್ಚುವರಿ ಮತಗಟ್ಟೆ ಸೇರಿಸಿ ಒಟ್ಟು 26 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಭಾರತ ಚುನಾವಣಾ ಆಯೋಗವು ಕೋವಿಡ್-19ರ ಹಿನ್ನೆಲೆಯಲ್ಲಿಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಮತದಾನ ನಡೆಸಲಾಗುವುದೆಂದು ಹೇಳಿದರು.
ಮಾದರಿ ನೀತಿ ಸಂಹಿತೆ ತಂಡ ರಚನೆ: ಕರ್ನಾಟಕ ಪಶ್ಚಿಮ ಪದವಿಧರ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಧಾರವಾಡ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಅ.28ರಂದು ಮತದಾನ ನಡೆಯಲಿದ್ದು, ನ.2ರಂದು ಮತ ಎಣಿಕೆ ಕಾರ್ಯ ನಡೆಸಲಾಗುವುದು. ಸೆ.29ರಿಂದಲೇ ಜಿಲ್ಲಾದ್ಯಂತ ಮಾದರಿ ನೀತಿಸಂಹಿತೆ ಜಾರಿಯಾಗಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿರುವಂತಹ ಮಾದರಿ ನೀತಿ ಸಂಹಿತೆ ಈಗಲೂ ಅನ್ವಯಿಸುತ್ತದೆ. ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಮಾದರಿ ನೀತಿ ಸಂಹಿತೆ ತಂಡ ರಚಿಸಿ ಆದೇಶ ಹೊರಡಿಸಲಾಗುವುದು ಎಂದರು.
ಸೂಕ್ತ ಕ್ರಮ: ಈ ಆದೇಶದನ್ವಯ ನಿಯೋಜಿತ ಪ್ರತಿ ತಂಡಕ್ಕೆ ಒಬ್ಬ ವಿಡಿಯೋಗ್ರಾಪರ್ ನೇಮಿಸಿ, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿವಿಡಿಯೋಗ್ರಾಫರ್ ಸಹಾಯದಿಂದ ಚಿತ್ರೀಕರಿಸಿ, ಆಯೋಗದ ಅಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರು. ಮಾದರಿ ನೀತಿಸಂಹಿತೆ ಎಲ್ಲಜನಪ್ರತಿನಿಧಿಗಳಿಗೂ ಅನ್ವಯಿಸುತ್ತಿದ್ದು, ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷದೊಂದಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಗುರುತಿಸಿಕೊಂಡಲ್ಲಿಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರದಲ್ಲಿತೊಡಗಿದ್ದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿಜಿಲ್ಲಾಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಉಪಸ್ಥಿತರಿದ್ದರು.