ಆ್ಯಪ್ನಗರ

ನೀರಿನ ಸಮಸ್ಯೆ: ಅಧಿಕಾರಿಗಳ ಪರಿಶೀಲನೆ

ಗೋಕರ್ಣ : ನೀರಿನ ಕೊರತೆ ಇರುವ ಗೋಕರ್ಣದ ಸುತ್ತಮುತ್ತಲ ಪ್ರದೇಶಗಳಿಗೆ ನೀರು ಮತ್ತು ನೈರ್ಮಲ್ಯ ಅಧಿಕಾರಿ ರಾಘವೇಂದ್ರ ನಾಯ್ಕ, ಕುಮಟಾ ತಹಸೀಲ್ದಾರ ಪ್ರಮೀಳಾ ದೇಶಪಾಂಡೆ, ತಾ.ಪಂ. ಇಒ ಚಂದ್ರಶೇಖರ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.

Vijaya Karnataka 5 May 2019, 5:00 am
ಗೋಕರ್ಣ : ನೀರಿನ ಕೊರತೆ ಇರುವ ಗೋಕರ್ಣದ ಸುತ್ತಮುತ್ತಲ ಪ್ರದೇಶಗಳಿಗೆ ನೀರು ಮತ್ತು ನೈರ್ಮಲ್ಯ ಅಧಿಕಾರಿ ರಾಘವೇಂದ್ರ ನಾಯ್ಕ, ಕುಮಟಾ ತಹಸೀಲ್ದಾರ ಪ್ರಮೀಳಾ ದೇಶಪಾಂಡೆ, ತಾ.ಪಂ. ಇಒ ಚಂದ್ರಶೇಖರ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web KWR-3 GKN 2 A


ಗೊಕರ್ಣದ ಸುತ್ತಮುತ್ತಲಿನ ತೊರ್ಕೆ, ಹನೇಹಳ್ಳಿ, ಹಿರೇಗುತ್ತಿ, ಗೋಕರ್ಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ನೀರಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಪ್ರತಿ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೀರಿನ ಅಭಾವ ಹೆಚ್ಚಾಗಿದೆ. ಇದಕ್ಕೆ ಮುಖ್ಯವಾದ ಕಾರಣ ಗಂಗಾವಳಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದು. ಹಿಂದೆಂದೂ ನದಿಯಲ್ಲಿ ಈ ವರ್ಷದಷ್ಟು ನೀರಿನ ಪ್ರಮಾಣ ಕಡಿಮೆಯಾಗಿರಲಿಲ್ಲ, ಹೀಗಾಗಿ ಕಾರವಾರ, ಅಂಕೋಲಾಕ್ಕೆ ನೀರು ಸರಬರಾಜು ಮಾಡುವುದನ್ನು ಸಹ ನಿಲ್ಲಿಸಲಾಗಿದೆ. ಅಧಿಕಾರಿಗಳು ತಮ್ಮ ತಂಡದೊಂದಿಗೆ ನೀರಿನ ಸಮಸ್ಯೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನೀರಿನ ಕೊರತೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರಿನ ವ್ಯವಸ್ಥೆ ಕೈಗೊಳ್ಳಲು ಹಾಗೂ ಈ ಪ್ರದೇಶಗಳಿಗೆ ತಕ್ಷ ಣ ನೀರು ತಲುಪಿಸುವ ವ್ಯವಸ್ಥೆಗೆ ಕ್ರಮ ಕೈಗೊಂಡರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ