ಆ್ಯಪ್ನಗರ

ತೇಗಿನಕೋಪ್ಪ ಜನರಿಗೆ ನೀರಿನ ವ್ಯವಸ್ಥೆ

ಮುಂಡಗೋಡ : ತಾಲೂಕಿನ ತೇಗಿನಕೋಪ್ಪ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಜಯ ಕರ್ನಾಟಕ ಸೋಮವಾರ ವಿಶೇಷ ವರದಿ ಪ್ರಕಟಿಸಿದ ಹಿನ್ನಲೆಯಲ್ಲಿ ಎಚ್ಚೇತ್ತುಕೊಂಡ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.

Vijaya Karnataka 28 May 2019, 5:00 am
ಮುಂಡಗೋಡ : ತಾಲೂಕಿನ ತೇಗಿನಕೋಪ್ಪ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಜಯ ಕರ್ನಾಟಕ ಸೋಮವಾರ ವಿಶೇಷ ವರದಿ ಪ್ರಕಟಿಸಿದ ಹಿನ್ನಲೆಯಲ್ಲಿ ಎಚ್ಚೇತ್ತುಕೊಂಡ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.
Vijaya Karnataka Web KWR-27MND1-
ತೇಗಿನಕೋಪ್ಪ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಜನರೊಂದಿಗೆ ಚರ್ಚಿಸುತ್ತಿರುವ ಅಧಿಕಾರಿಗಳು.


ತಾಲೂಕಿನ ಚವಡಳ್ಳಿ ಪಂಚಾಯಿತಿ ವ್ಯಾಪ್ತಿಯ ತೇಗಿನಕೋಪ್ಪ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಗ್ರಾಮದಲ್ಲಿನ ನಾಲ್ಕು ಕೈಪಂಪ್‌ಗಳು ಹಾಗೂ ಕಿರು ನೀರು ಸರಬರಾಜು ಯೋಜನೆ ಸ್ಥಗಿತಗೊಂಡಿದ್ದು ಇದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ಗ್ರಾಮದ ಅನೀಲಕುಮಾರ ರಾಠೋಡ ಎಂಬುವರು ಜನರಿಗೆ ಪ್ರತಿದಿನ ತಮ್ಮ ಬೋರವೇಲ್‌ನಿಂದ ಕುಡಿಯುವ ನೀರು ನೀಡುತ್ತಿದ್ದು ಈ ಕುರಿತು ವಿಜಯ ಕರ್ನಾಟಕ 27ರಂದು ವಿಶೇಷ ವರದಿ ಪ್ರಕಟಿಸಿತ್ತು. ಪತ್ರಿಕೆಯಲ್ಲಿ ವರದಿಯನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಕೂಡಲೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ತಹಸೀಲ್ದಾರ್‌ ಸೂಚನೆ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ಇಂದೂರ ಗ್ರಾಮ ಲೇಕ್ಕಾಧಿಕಾರಿ ಹಾಗೂ ಚವಡಳ್ಳಿ ಪಂಚಾಯಿತಿ ಪಿಡಿಓ ಸಂತೋಷ ಹಜೇರಿ ತೇಗಿನಕೋಪ್ಪ ಗ್ರಾಮಕ್ಕೆ ಭೇಟಿ ನೀಡಿ ಅನೀಲಕುಮಾರ ರಾಠೋಡ ಅವರ ಬೋರವೇಲ್‌ನ್ನು ಭಾಡಿಗೆ ಆಧಾರದ ಮೇಲೆ ಪಡೆದುಕೊಂಡು ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ. ಪತ್ರಿಕೆ ವರದಿಯಿಂದ ನಮಗೆ ಕುಡಿಯುವ ನೀರಿನ ವ್ಯವಸ್ಥೆಯಾಯಿತು ಎಂದು ಜನರು ವಿಕ ಪತ್ರಿಕೆಗೆ ಧನ್ಯವಾದ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ