ಆ್ಯಪ್ನಗರ

ಮೈತ್ರಿ ಅಭ್ಯರ್ಥಿಗೆ ಗೆಲುವು: ದೇಶಪಾಂಡೆ ವಿಶ್ವಾಸ

ಮುಂಡಗೋಡ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮೀಶ್ರ ಸರಕಾರ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಆದ್ದರಿಂದ ಈ ಭಾರಿ ಜನರು ನಮ್ಮ ಮೈತ್ರಿ ಪಕ್ಷ ದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

Vijaya Karnataka 18 Apr 2019, 5:00 am
ಮುಂಡಗೋಡ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮೀಶ್ರ ಸರಕಾರ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಆದ್ದರಿಂದ ಈ ಭಾರಿ ಜನರು ನಮ್ಮ ಮೈತ್ರಿ ಪಕ್ಷ ದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.
Vijaya Karnataka Web win alliance candidate deshpandes confidence
ಮೈತ್ರಿ ಅಭ್ಯರ್ಥಿಗೆ ಗೆಲುವು: ದೇಶಪಾಂಡೆ ವಿಶ್ವಾಸ


ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉತ್ತರ ಕನ್ನಡ ಜಿಲ್ಲೆಗೆ ಸಾಕಷ್ಟು ಅನುದಾನ ಬಂದಿದೆ. ಇದೀಗ ನಮ್ಮ ಮೈತ್ರಿ ಸರಕಾರವೂ ಕೂಡಾ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು ಹಂತ ಹಂತವಾಗಿ ಅಭಿವೃದ್ಧಿ ಮಾಡುತ್ತೇವೆ. ರಾಜ್ಯದ ಮುಖ್ಯಮಂತ್ರಿಗಳು ರೈತರ ಸಾಲ ಮನ್ನಾ ಯೋಜನೆಯನ್ನು ಈಗಾಗಲೇ ಜಾರಿಗೆ ತರುವ ಮೂಲಕ ರೈತರ ಕಷ್ಟಗಳನ್ನು ನಿವಾರಣೆ ಮಾಡಿದ್ದಾರೆ ಎಂದರು.

ಬಿಜೆಪಿ ಪಕ್ಷ ದವರು ತಮ್ಮ ಸಾಧನೆಯನ್ನು ಮುಂದಿಟ್ಟು ಮತ ಕೇಳದೆ ಮೋದಿ ಹೆಸರಿನಲ್ಲಿ ಮತ ಕೇಳುತ್ತಾರೆ. ಈ ಜಿಲ್ಲೆಯ ಸಂಸದರು ಹೋದ ಕಡೆಗಳಲ್ಲಿ ಮೈತ್ರಿ ಸರಕಾರ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಸರಕಾರ ಸುಭದ್ರವಾಗಿದೆ. ಐದು ಭಾರಿ ಸಂಸದರಾಗಿರುವ ಅನಂತಕುಮಾರ ಹೆಗಡೆ ಅವರ ಸಾಧನೆಯನ್ನು ನಾವು ಪ್ರಶ್ನೆ ಮಾಡಬೇಕಾಗಿದೆ ಎಂದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ಸೃಷ್ಟಿಗೆ ಹೊಸದಾಗಿ ಉದ್ಯೋಗ ಮಂತ್ರಾಲಯ ಸ್ಥಾಪನೆ ಮಾಡಲಾಗುವುದು ಎಂದರು.

ನಂತರ ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷ ದ ಮೈತ್ರಿಯೂ ರಾಷ್ಟ್ರದ ನಾಯಕರ ನಿರ್ಣಯದಂತೆ ಆಗಿರುವುದರಿಂದ ಅವರ ತೀರ್ಮಾನಅಂತಿಮ. ಹಾಗಾಗಿ ಜೆಡಿಎಸ್‌ ಅಭ್ಯರ್ಥಿ ಆನಂದ ಅಸ್ನೋಟಿಕರ್‌ ಅವರನ್ನು ಎರಡು ಪಕ್ಷ ದವರು ಸೇರಿ ಗೆಲ್ಲಿಸೋಣ. ಕೋಮುವಾದಿ ಪಕ್ಷ ದಿಂದ ರಾಷ್ಟ್ರವನ್ನು ಕಾಪಾಡಲು ಎಲ್ಲ ಪಕ್ಷ ದವರು ಒಟ್ಟಾಗಿದ್ದು ಅಭ್ಯರ್ಥಿ ಹಾಕಿದ್ದೇವೆ. ಕಾಂಗ್ರೆಸ್‌ ಕಾರ್ಯಕರ್ತರಿಗೆ ಸ್ವಲ್ಪ ಮುಜುಗುರ ಆಗಬಹುದು ಆದರೂ ಎಲ್ಲವನ್ನೂ ಮರೆತು ಮನೆ ಮನೆಗೆ ಹೋಗಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.

ಈ ವೇಳೆ ನಿವೇದಿತ್‌ ಆಳ್ವ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ಆರ್‌.ನಾಯ್ಕ, ಜಿಪಂ.ಸದಸ್ಯ ರವಿಗೌಡ ಪಾಟೀಲ, ಕೃಷ್ಣ ಹಿರಳ್ಳಿ, ಎಚ್‌.ಎಂ.ನಾಯ್ಕ, ಪಿ.ಎಸ್‌.ಸಂಗೂರಮಠ, ಜೆಡಿಎಸ್‌ ಕ್ಷೇತ್ರಾಧ್ಯಕ್ಷ ಅರುಣ ಗೊಂದಳೆ, ಜೆಡಿಎಸ್‌ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಕುಟ್ರಿ ಇನ್ನಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ