ಆ್ಯಪ್ನಗರ

ಯಡಿಯೂರಪ್ಪ ಪ್ರಮಾಣ:ಬಿಜೆಪಿ ವಿಜಯೋತ್ಸವ

ಯಲ್ಲಾಪುರ : ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕರಿಸುತ್ತಿಂದ್ದಂತೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮ ಹಂಚಿಕೊಂಡರು. ಪಟ್ಟಣದ ಪೋಲೀಸ್‌ ಠಾಣೆ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

Vijaya Karnataka 27 Jul 2019, 5:00 am
ಯಲ್ಲಾಪುರ : ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕರಿಸುತ್ತಿಂದ್ದಂತೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
Vijaya Karnataka Web yeddyurappa amount bjp triumph
ಯಡಿಯೂರಪ್ಪ ಪ್ರಮಾಣ:ಬಿಜೆಪಿ ವಿಜಯೋತ್ಸವ


ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ರಾಜ್ಯ ಬಿಜೆಪಿ ವಕ್ತಾರ ಪ್ರಮೋದ ಹೆಗಡೆ ಮಾತನಾಡಿ, ಇದೊಂದು ಐತಿಹಾಸಿಕ ದಿನವಾಗಿದೆ. ರಾಜ್ಯದ ಅಭಿವೃದ್ಧಿಯ ಸುವರ್ಣ ಪರ್ವ ಈಗ ಶುರುವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿ ಬಂದಿದ್ದು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದರು.

ಬಿಜೆಪಿ ಪ್ರಮುಖ ರಾಮು ನಾಯ್ಕ ಮಾತನಾಡಿ, ಹುಟ್ಟು ಹೋರಾಟಗಾರ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಕೋಟ್ಯಂತರ ಜನರಿಗೆ ಖುಷಿ ನೀಡಿದೆ. ಈ ಹಿಂದಿನ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ದಿನ ನಿತ್ಯ ನಡೆಯುತ್ತಿದ್ದ ಕಚ್ಚಾಟವನ್ನು ನೋಡಿ ಬೇಸತ್ತಿದ್ದ ರಾಜ್ಯದ ಜನರಿಗೆ ಈಗ ಸಂತಸವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಪ್ರಸಾದ ಹೆಗಡೆ,ಅನಂತ ಗಾಂವ್ಕಾರ, ಶ್ಯಾಮಿಲಿ ಪಾಠಣಕರ್‌,ಬಾಬು ಬಾಂದೇಕರ್‌, ನಮಿತಾ ಬೀಡಿಕರ್‌ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ