ಆ್ಯಪ್ನಗರ

ಸಾಲಬಾಧೆ ತಾಳದೇ ಇಬ್ಬರು ರೈತರು ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ತಾಳದೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೊಲ್ಹಾರ ಹಾಗೂ ಸಿಂದಗಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

Vijaya Karnataka 18 Jul 2018, 5:00 am
ವಿಜಯಪುರ: ಸಾಲಬಾಧೆ ತಾಳದೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕೊಲ್ಹಾರ ಹಾಗೂ ಸಿಂದಗಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
Vijaya Karnataka Web
ಸಾಲಬಾಧೆ ತಾಳದೇ ಇಬ್ಬರು ರೈತರು ಆತ್ಮಹತ್ಯೆ

ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದ ಬಸಪ್ಪ ಚಂದ್ರಪ್ಪ ಮದಕವಿ (60) ಸೋಮವಾರ ತಡರಾತ್ರಿ ತನ್ನ ಜಮೀನಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 4 ಎಕರೆ ಜಮೀನು ಹೊಂದಿದ್ದು, ಬಾವಿ ಕೊರೆಸಲು ಹಾಗೂ ಕೃಷಿ ಚಟುವಟಿಕೆಗೆ ತೆಲಗಿ ಗ್ರಾಮದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ 2 ಲಕ್ಷ ಸಾಲ, ಜತೆಗೆ ಖಾಸಗಿಯಾಗಿಯೂ ಒಂದಿಷ್ಟು ಸಾಲ ಮಾಡಿಕೊಂಡಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೊಲ್ಹಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕೋರಳ್ಳಿಯಲ್ಲೂ: ಸಾಲಬಾಧೆ ತಾಳದೆ ಸಿಂದಗಿ ತಾಲೂಕಿನ ಕೋರಳ್ಳಿ ಗ್ರಾಮದ ರೈತ ಮಡಿವಾಳಪ್ಪ ಭೀಮರಾಯ ವಾಲಿಕಾರ (44) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೃಷಿ ಚಟುವಟಿಕೆಗೆ ಸಿಂದಗಿಯ ಸಿಂಡಿಕೇಟ್‌ ಬ್ಯಾಂಕ್‌ ಶಾಖೆಯಲ್ಲಿ 1.50 ಲಕ್ಷ ಹಾಗೂ ಊರಲ್ಲಿ ಖಾಸಗಿಯಾಗಿ 1 ಲಕ್ಷ ಸೇರಿದಂತೆ ಒಟ್ಟು 2.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಆಲಮೇಲ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ