Please enable javascript.ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಅನ್ಯಾಯ ಬೇಡ : ಅರುಣ ಶಹಾಪುರ - ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಅನ್ಯಾಯ ಬೇಡ : ಅರುಣ ಶಹಾಪುರ - Vijay Karnataka

ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಅನ್ಯಾಯ ಬೇಡ : ಅರುಣ ಶಹಾಪುರ

Vijaya Karnataka Web 8 Jan 2014, 4:47 am
Subscribe

ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ನೇಮಕಾತಿ ಆದ ದಿನಕ್ಕೆ ಅನ್ವಯಿಸುವಂತೆ ನಿವೃತ್ತಿ ವೇತನ ಹಾಗೂ ಸೌಲಭ್ಯ ಕೊಡುವಂತೆ ಸುಪ್ರಿಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 5 ಸಾವಿರ ಕೋಟಿ ರೂ. ಹೊರೆಯಾಗುವುದೆಂದು ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರರವರು ನೀಡಿರುವ ಹೇಳಿಕೆ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ತಿಳಿಸಿದ್ದಾರೆ.

ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಅನ್ಯಾಯ ಬೇಡ : ಅರುಣ ಶಹಾಪುರ
ವಿಜಾಪುರ: ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ನೇಮಕಾತಿ ಆದ ದಿನಕ್ಕೆ ಅನ್ವಯಿಸುವಂತೆ ನಿವೃತ್ತಿ ವೇತನ ಹಾಗೂ ಸೌಲಭ್ಯ ಕೊಡುವಂತೆ ಸುಪ್ರಿಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 5 ಸಾವಿರ ಕೋಟಿ ರೂ. ಹೊರೆಯಾಗುವುದೆಂದು ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರರವರು ನೀಡಿರುವ ಹೇಳಿಕೆ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಪ್ರಿಂಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಸಚಿವರು ತಿಳಿಸಿದ್ದಾರೆ. ಸರಕಾರಕ್ಕೆ ಆಗುವ ಆರ್ಥಿಕ ಹೊರೆ ಕುರಿತು ಅಂಕಿಅಂಶ ನೀಡುತ್ತಿರುವುದು ಶಿಕ್ಷಕರನ್ನು ವಂಚಿಸುವ ಕಾರ್ಯವೇ ಎನ್ನುವುದಕ್ಕೆ ಸಚಿವರು ಸ್ಪಷ್ಟನೆ ನೀಡಬೇಕು. ಶಿಕ್ಷಕರು ನೇಮಕಾತಿ ಆದ ದಿನಾಂಕದಿಂದ ಅನುದಾನಕ್ಕೆ ಒಳಪಡುವವರೆಗೂ ಸಲ್ಲಿಸಿರುವ ಸೇವೆಯನ್ನು ಸರಕಾರ ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದು. ಸುರ್ಗೀವಾಜ್ಞೆ ತರುವುದು ಬಡ ಶಿಕ್ಷಕರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದೂರಿದ್ದಾರೆ.

ಸರಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವ ಹಾಗೂ ಸುರ್ಗೀವಾಜ್ಞೆ ತರುವ ಕಾರ್ಯ ಮಾಡದೆ ಶಿಕ್ಷಕರ ಪರ ನಿಲುವು ತೆಗೆದುಕೊಂಡು ಅವರ ಸೇವೆ ಪರಿಗಣಿಸುವ ಕಾರ್ಯ ಮಾಡಬೇಕು. ಶಿಕ್ಷಕರ ವಿರೋಧಿ ಸರಕಾರ ಎಂಬ ಕಳಂಕ ತಂದುಕೊಳ್ಳುವುದು ಬೇಡ ಎಂದು ಅರುಣ ಶಹಾಪುರ ತಿಳಿಸಿದ್ದಾರೆ.

ಪಿಯುಸಿ ಶಿಕ್ಷಣ ಶುಲ್ಕ ಹೆಚ್ಚಳಕ್ಕೆ ಸರಕಾರ ಮುಂದಾಗಿರುವುದನ್ನು ವಿರೋಧಿಸುತ್ತೇವೆ. ವಿದ್ಯಾರ್ಥಿ ಸಂಘಟನೆಗಳ ಜತೆ ಚರ್ಚಿಸದೆ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ. ಸರಕಾರವು ವಿದ್ಯಾರ್ಥಿ ವಿರೋಧಿ ನೀತಿಯಾದ ಶುಲ್ಕ ಹೆಚ್ಚಳ ಪ್ರಕ್ರಿಯಿಂದ ಹಿಂದೆ ಸರಿಯಬೇಕು. ಈಗ ಸರ್ಕಾರ ಹೆಚ್ಚಳ ಮಾಡಿರುವ ಶುಲ್ಕವನ್ನು 2013-14 ಶೈಕ್ಷಣಿಕ ವರ್ಷದಿಂದಲೇ ವಸೂಲಿ ಮಾಡಬೇಕೆಂದು ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸುತ್ತೋಲೆ ಕಳುಹಿಸಿರುವುದು ಖಂಡನೀಯ. ತಕ್ಷಣ ಶುಲ್ಕ ಹೆಚ್ಚಳದ ಪ್ರಸ್ತಾವನೆ ಕೈಬಿಡಬೇಕೆಂದು ಅರುಣ ಶಹಾಪುರ ಆಗ್ರಹಿಸಿದ್ದಾರೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ