ವಿಜಯಪುರ: ಜಾತಿ ನಿಂದನೆ ಮಾಡಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಇಲ್ಲಿನ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದ ರಮೇಶ ಮುದಕಪ್ಪ ಅಗಸರ ಶಿಕ್ಷೆಗೊಳಗಾದವ. ಈತ 2013ರ ಡಿ.15ರಂದು ಒಬ್ಬಂಟಿಯಾಗಿದ್ದ ಮಹಿಳೆ ಮೇಲೆ ಜಾತಿ ನಿಂದನೆ ಮಾಡಿದ್ದ. ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸಿಂದಗಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯರು, ಆರೋಪಿ ಮಾಡಿದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ 10 ವರ್ಷ ಶಿಕ್ಷೆ ಹಾಗೂ 2ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಎನ್.ಎಸ್.ಪಾಟೀಲ ವಕಾಲತ್ತು ವಹಿಸಿದ್ದರು.
ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದ ರಮೇಶ ಮುದಕಪ್ಪ ಅಗಸರ ಶಿಕ್ಷೆಗೊಳಗಾದವ. ಈತ 2013ರ ಡಿ.15ರಂದು ಒಬ್ಬಂಟಿಯಾಗಿದ್ದ ಮಹಿಳೆ ಮೇಲೆ ಜಾತಿ ನಿಂದನೆ ಮಾಡಿದ್ದ. ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸಿಂದಗಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯರು, ಆರೋಪಿ ಮಾಡಿದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ 10 ವರ್ಷ ಶಿಕ್ಷೆ ಹಾಗೂ 2ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಎನ್.ಎಸ್.ಪಾಟೀಲ ವಕಾಲತ್ತು ವಹಿಸಿದ್ದರು.