ಆ್ಯಪ್ನಗರ

ಶಾಲಾ-ಕಾಲೇಜ್‌ಗೆ 3 ದಿನ ರಜೆ

ವಿಜಯಪುರ : ಭೀಮಾ ನದಿಯಲ್ಲಿ ನೀರಿನ ಹರಿವು ಸಹಜ ಸ್ಥಿತಿಗೆ ಬಂದಿದೆ. ಆದರೆ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿಲ್ಲ. ಹೀಗಾಗಿ ಜಲಾಶಯದಿಂದ 5.70 ಲಕ್ಷ ಕ್ಯೂಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಹೀಗಾಗಿ ಜಲಾವೃತಗೊಂಡ ಮುದ್ದೇಬಿಹಾಳ, ನಿಡಗುಂದಿ ಹಾಗೂ ಬಬಲೇಶ್ವರ ತಾಲೂಕಿನ ಜನತೆಗೆ ತೆರೆದಿರುವ ಕಾಳಜಿ ಕೇಂದ್ರಗಳನ್ನು ಜಿಲ್ಲಾಡಳಿತ ಮುಂದುವರಿಸಿದೆ. ಪ್ರವಾಹದಿಂದ ತತ್ತರಿಸಿದ ಈ ಹಳ್ಳಿಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತೆ ಮೂರು ದಿನ ಶಾಲಾ-ಕಾಲೇಜ್‌ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Vijaya Karnataka 13 Aug 2019, 5:00 am
ವಿಜಯಪುರ : ಭೀಮಾ ನದಿಯಲ್ಲಿ ನೀರಿನ ಹರಿವು ಸಹಜ ಸ್ಥಿತಿಗೆ ಬಂದಿದೆ. ಆದರೆ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿಲ್ಲ. ಹೀಗಾಗಿ ಜಲಾಶಯದಿಂದ 5.70 ಲಕ್ಷ ಕ್ಯೂಸೆಕ್‌ ನೀರು ಹೊರಗೆ ಬಿಡಲಾಗುತ್ತಿದೆ. ಹೀಗಾಗಿ ಜಲಾವೃತಗೊಂಡ ಮುದ್ದೇಬಿಹಾಳ, ನಿಡಗುಂದಿ ಹಾಗೂ ಬಬಲೇಶ್ವರ ತಾಲೂಕಿನ ಜನತೆಗೆ ತೆರೆದಿರುವ ಕಾಳಜಿ ಕೇಂದ್ರಗಳನ್ನು ಜಿಲ್ಲಾಡಳಿತ ಮುಂದುವರಿಸಿದೆ. ಪ್ರವಾಹದಿಂದ ತತ್ತರಿಸಿದ ಈ ಹಳ್ಳಿಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತೆ ಮೂರು ದಿನ ಶಾಲಾ-ಕಾಲೇಜ್‌ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Vijaya Karnataka Web 3 day vacation for school and college
ಶಾಲಾ-ಕಾಲೇಜ್‌ಗೆ 3 ದಿನ ರಜೆ


ಅನುದಾನ ಬಿಡುಗಡೆ

ನೆರೆ ಹಾವಳಿಯಿಂದ ತತ್ತರಿಸಿದ ಈ ಮೂರು ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಪುನರ್ವಸತಿ ಕೇಂದ್ರಗಳ ನಿರ್ವಹಣೆ ಕುರಿತು ಜಿಲ್ಲಾಡಳಿತ 1.25 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ. ಈ ಪೈಕಿ ಹೆಚ್ಚು ಬಾಧೆಗೊಳಗಾಗಿದ್ದು, ಮುದ್ದೇಬಿಹಾಳ ತಾಲೂಕಿನ ಹಳ್ಳಿಗಳು. ಹಾಗಾಗಿ ಮುದ್ದೇಬಿಹಾಳ ತಹಸೀಲ್ದಾರ್‌ಗೆ 1 ಕೋಟಿ ರೂ. ಬಿಡುಗಡೆ ಮಾಡಿದ್ದರೆ, ನಿಡಗುಂದಿ ತಾಲೂಕಿನ 25 ಲಕ್ಷ ರೂ. ಬಿಡುಗಡೆ ಮಾಡಿದೆ.

ಕಾಳಜಿ ಕೇಂದ್ರ

ಹಿನ್ನೀರಿನಿಂದ ಮನೆಗಳಿಗೆ ನೀರು ನುಗ್ಗಿದ್ದರಿಂದಾಗಿ ಸಂತ್ರಸ್ತರನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಜಿಪಂ ಸಿಇಒ ವಿಕಾಸ ಸುರಳಕರ ಹಾಗೂ ಎಸ್ಪಿ ಪ್ರಕಾಶ ನಿಕ್ಕಂ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮನೆ ಹಾನಿ

ಮನೆ ಹಾನಿ ಮೌಲ್ಯಮಾಪನಕ್ಕಾಗಿ ಅಧಿಕಾರಿಗಳ ತಂಡ ರಚಿಸಿದ್ದು, ಅವರ ಪ್ರಗತಿಯನ್ನು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಪರಿಶೀಲಿಸಲಾಯಿತು.

ಜಿಲ್ಲಾಡಳಿತ ಆಯಾ ಗ್ರಾಮದಲ್ಲಿರುವ ಶಾಲೆ ಹಾಗೂ ಕಾಲೇಜ್‌ಗಳಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಗಳಲ್ಲಿ ಪ್ರವಾಹ ಪೀಡಿತ ಗ್ರಾಮಸ್ಥರು ತಂಗಿರಲು ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಇಂಥ ಶಾಲೆ ಹಾಗೂ ಕಾಲೇಜ್‌ಗಳಿಗೆ ಮಾತ್ರ ಆ.13ರಿಂದ 16ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆ.16ರ ನಂತರ ಮತ್ತೆ ಶಾಲಾ-ಕಾಲೇಜ್‌ಗಳು ಪುನಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭೀಮಾ ನದಿ ಸಹಜ ಸ್ಥಿತಿಗೆ ಮರಳಿದೆ. ಹೀಗಾಗಿ ನದಿ ಪಾತ್ರದ ಇಂಡಿ, ಚಡಚಣ ಹಾಗೂ ಸಿಂದಗಿ ತಾಲೂಕಿನ ಗ್ರಾಮಗಳಲ್ಲಿ ಕೃಷಿ, ಬೆಳೆ ಹಾನಿ ಸಮೀಕ್ಷೆ ಆರಂಭಿಸಲಾಗಿದೆ. ಕೃಷಿ, ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಸಿಬ್ಬಂದಿ ಬೆಳೆ ಹಾನಿ ಸಮೀಕ್ಷೆ ಆರಂಭಿಸಿದ್ದಾರೆ.

-------------------

ಕೆಎಸ್ಸಾರ್ಟಿಸಿಗೆ ಕೋಟಿ ರೂ. ಹಾನಿ

ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ತಲೆದೋರಿದ ಪ್ರವಾಹದಿಂದಾಗಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗ 1 ಕೋಟಿ ರೂ. ನಷ್ಟ ಅನುಭವಿಸಿದೆ.

ವಿಜಯಪುರ ವಿಭಾಗದಿಂದ ಮಹಾರಾಷ್ಟ್ರ, ಗೋವಾ ಸೇರಿದಂತೆ ಹುಬ್ಬಳ್ಳಿ, ಬೆಳಗಾವಿಗೆ ನಿತ್ಯ ಸಂಚರಿಸುತ್ತಿದ್ದ 70 ಶೆಡ್ಯೂಲ್‌ಗಳು ಆ.9ರಿಂದ ಸಂಪೂರ್ಣ ಸ್ಥಗಿತಗೊಳಿಸಿದ್ದರಿಂದಾಗಿ ದಿನವೊಂದಕ್ಕೆ 15 ಲಕ್ಷ ರೂ. ಆದಾಯಕ್ಕೆ ಖೋತಾ ಬಿದ್ದಿದೆ. ಹೀಗಾಗಿ ವಾಸ್ಕೋ, ಪಣಜಿ, ಮಡಗಾಂವ, ಮಹಾರಾಷ್ಟ್ರದ ರತ್ನಾಗಿರಿ, ಮಿರಜ್‌, ಸಾಂಗಲಿ, ಬೆಳಗಾವಿ, ಹುಬ್ಬಳ್ಳಿ ಶೆಡ್ಯೂಲ್‌ಗಳು ಸಂಪೂರ್ಣ ಬಂದ್‌ ಆಗಿವೆ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದರು.

--------

ಬಂದ್‌ ಇರುವ ರಸ್ತೆಗಳು

ವಿಜಯಪುರ-ಜಮಖಂಡಿ, ವಿಜಯಪುರ-ಹುಬ್ಬಳ್ಳಿ, ವಿಜಯಪುರ-ಸಾಂಗ್ಲಿ, ವಿಜಯಪುರ-ಸಾತಾರ ರಸ್ತೆಗಳ ಸಂಪರ್ಕ ಇನ್ನೂ ಬಂದ್‌ ಆಗಿದ್ದು, ಬಸ್‌ ಸಂಚಾರವಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ