ಆ್ಯಪ್ನಗರ

45 ಸಾವಿರ ಲಂಚ ಕೇಳಿದ್ದ NEKRTC ಅಧಿಕಾರಿ ಮೇಲೆ ಎಸಿಬಿ ದಾಳಿ

ಲಂಚ ಪಡೆಯುತ್ತಿದ್ದ ಎನ್‌ಇಕೆಆರ್‌ಟಿಸಿ ವಿಭಾಗೀಯ ಕಚೇರಿಯ ಕಿರಿಯ ಸಹಾಯಕನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Vijaya Karnataka Web 5 Sep 2019, 7:08 pm
ವಿಜಯಪುರ: ವೈದ್ಯಕೀಯ ವೆಚ್ಚದ ಬಿಲ್ ಪಾವತಿಸಲು ವ್ಯಕ್ತಿಯೊಬ್ಬರಿಂದ 45 ಸಾವಿರ ರೂಪಾಯಿ ಲಂಚ್ ಪಡೆಯುತ್ತಿದ್ದ ಎನ್‌ಇಕೆಆರ್‌ಟಿಸಿ ವಿಭಾಗೀಯ ಕಚೇರಿಯ ಕಿರಿಯ ಸಹಾಯಕನ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Vijaya Karnataka Web acb


ನಗರದ ವಿಭಾಗೀಯ ಕಚೇರಿಯಲ್ಲಿ ಕಾರ್ಮಿಕ ಶಾಖೆಯ ಕಿರಿಯ ಸಹಾಯಕ ರಘುನಾಥ ಸೇವತಕರ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಸಾರಿಗೆ ನಿಯಂತ್ರಕ ಪೂಜಾರಿ ಎಂಬವರ ಬಳಿ 1.10 ಲಕ್ಷ ರೂಪಾಯಿ ವೈದ್ಯಕೀಯ ವೆಚ್ಚದ ಬಿಲ್ ಪಾವತಿಸಲು 45 ಸಾವಿರ ಲಂಚ ಕೇಳಿದ್ದ ಅಧಿಕಾರಿ, ಮೊದಲ ಕಂತಾಗಿ 25 ಸಾವಿರ ರೂಪಾಯಿ ಪಡೆದಿದ್ದ. ಬಾಕಿ 20 ಸಾವಿರ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ವಿಜಯಪುರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ