ಆ್ಯಪ್ನಗರ

ಆಲಮಟ್ಟಿ ಜಲಾಶಯ ಭರ್ತಿ!

ಜಲಾಶಯಕ್ಕೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸುವ ಸಾಧ್ಯತೆಗಳಿವೆ. ಆಲಮಟ್ಟಿ ಜಲಾಶಯಕ್ಕೆ ಈ ಬಾರಿ ಅವಧಿಗೂ ಮುನ್ನವೇ ಒಳಹರಿವು ಕಂಡು ಬಂದಿತ್ತು.

Vijaya Karnataka Web 25 Aug 2020, 12:27 am
ಆಲಮಟ್ಟಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿಸುರಿದ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಸಾಕಷ್ಟು ಪ್ರಮಾಣದ ನೀರು ಹರಿದು ಬಂದ ಪರಿಣಾಮ ಜಲಾಶಯ ಸೋಮವಾರ ಬಹುತೇಕ ಭರ್ತಿಯಾಗಿದೆ.
Vijaya Karnataka Web ಆಲಮಟ್ಟಿ ಜಲಾಶಯ
ಆಲಮಟ್ಟಿ ಜಲಾಶಯ


ಮಂಗಳವಾರ ಆಲಮಟ್ಟಿ ಜಲಾಶಯ ವೀಕ್ಷಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆಗಮಿಸುವ ಹಿನ್ನಲೆಯಲ್ಲಿಆಲಮಟ್ಟಿ ಜಲಾಶಯದಿಂದ ಹೊರ ಹರಿವನ್ನು ಕಡಿಮೆಗೊಳಿಸಿ ಜಲಾಶಯದಲ್ಲಿನೀರು ಸಂಗ್ರಹಕ್ಕೆ ಆದ್ಯತೆ ನೀಡಲಾಗಿದೆ.

ಗರಿಷ್ಠ 519.60 ಮೀಟರ್‌ ಎತ್ತರದಲ್ಲಿ123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸೋಮವಾರ ಸಂಜೆ 519.32 ಮೀಟರ್‌ ಎತ್ತರದಲ್ಲಿ118.221 ಟಿಎಂಸಿ ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ ಒಳಹರಿವಿನ ಪ್ರಮಾಣ 1,88,264 ಕ್ಯುಸೆಕ್‌ ಇದ್ದರೆ ಹೊರ ಹರಿವಿನ ಪ್ರಮಾಣ 1 ಲಕ್ಷ ಕ್ಯೂಸೆಕ್‌ ಇತ್ತು. ಮಂಗಳವಾರ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.

ಜಲಾಶಯಕ್ಕೆ ಮಧ್ಯಾಹ್ನ ಭೇಟಿ ನೀಡುತ್ತಿರುವ ಸಿಎಂ ಯಡಿಯೂರಪ್ಪ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸುವ ಸಾಧ್ಯತೆಗಳಿವೆ. ಆಲಮಟ್ಟಿ ಜಲಾಶಯಕ್ಕೆ ಈ ಬಾರಿ ಅವಧಿಗೂ ಮುನ್ನವೇ ಒಳಹರಿವು ಕಂಡು ಬಂದಿತ್ತು. ಜೂ.4ರಿಂದ ಒಳಹರಿವು ಕಂಡ ಆಲಮಟ್ಟಿ ಜಲಾಶಯ ಅವಧಿಗೂ ಮುನ್ನವೇ ಭರ್ತಿಯಾಗುವ ಆಶಯ ರೈತರದ್ದಾಗಿತ್ತು. ನಂತರ ಮಹಾ ಮಳೆ ಕಡಿಮೆಯಾಗಿತ್ತು.

ಆ.7ರಿಂದ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿನೀರು ಹರಿದು ಬಂದ ಕಾರಣ ಮುಂಜಾಗ್ರತೆ ಕ್ರಮವಾಗಿ ಜಲಾಶಯದಿಂದ ಲಕ್ಷಾಂತರ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿತ್ತು. ಮುಖ್ಯಮಂತ್ರಿಗಳು ಆಲಮಟ್ಟಿ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗುತ್ತಿದ್ದಂತೆ ಜಲಾಶಯ ಭರ್ತಿ ಮಾಡುವತ್ತ ಅಧಿಕಾರಿಗಳು ಗಮನ ಹರಿಸಿ ನಿಧಾನವಾಗಿ ಹೊರ ಹರಿವನ್ನು ಕಡಿಮೆಗೊಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ